ಅರೆಭಾಷಿಕ ಗೌಡ ಜನಾಂಗದ‌‌ ಶಾಸಕರ ಅಭಿಮಾನಿ ಬಳಗದಿಂದ ಸನ್ಮಾನ: ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಜೀವನ ನಡೆಸಬೇಕು: ಶಾಸಕ ಎಎಸ್ ಪೊನ್ನಣ್ಣ

ಅರೆಭಾಷಿಕ ಗೌಡ ಜನಾಂಗದ‌‌ ಶಾಸಕರ ಅಭಿಮಾನಿ ಬಳಗದಿಂದ ಸನ್ಮಾನ:  ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಜೀವನ ನಡೆಸಬೇಕು: ಶಾಸಕ ಎಎಸ್ ಪೊನ್ನಣ್ಣ

ಭಾಗಮಂಡಲ:ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳ ವತಿಯಿಂದ ಭಾಗಮಂಡಲದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇತ್ತೀಚೆಗೆ ಮುಕ್ತಾಯಗೊಂಡ ಪವಿತ್ರ ಕಾವೇರಿ ತುಲಾ ಸಂಕ್ರಮಣ ಸಂದರ್ಭ, ಶಾಸಕರು ಅತ್ಯಂತ ಅಚ್ಚುಕಟ್ಟಾಗಿ, ಸೌಹಾರ್ದಯುತವಾಗಿ ಎಲ್ಲಾ ಜನಾಂಗದವರು ತಾಯಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಉಗಮಿಸುವುದನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಕ್ಕೆ ಈ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಸ್ಥಳೀಯ ಹಾಗೂ ಸುತ್ತಮುತ್ತಲಿನ ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಮಾನ್ಯ ಶಾಸಕರನ್ನು ಸನ್ಮಾನಿಸಿದರು.

 ಸನ್ಮನಾ ಸ್ವೀಕರಿಸಿ ಮಾತನಾಡಿದ ಶಾಸಕರು, ನಮ್ಮ ನಾಡು ಸುಖ-ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯಿಂದ ಇರಬೇಕಾದರೆ, ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು. ತಾಯಿ ಕಾವೇರಿಯ ಆಶೀರ್ವಾದ ಎಲ್ಲರ ಮೇಲಿರಬೇಕೆಂದರೆ ಎಲ್ಲರೂ ತಾಯಿಯ ಇಚ್ಛೆಯಂತೆ ನಾಡಿನ ಒಳಿತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಭಾಗಮಂಡಲ ವಲಯ ಅಧ್ಯಕ್ಷರು ವೆಂಕಟೇಶ್, ಹರ್ಷ, ಪ್ರಕಾಶ್, ಸೂರಜ್ ಹೊಸೂರು, ಸಂಪನ್ ಅಯ್ಯಪ್ಪ, ರವಿರಾಜ್ ಹೊಸೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.