ಜೆ.ಕೆ ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ: ಅಭಿನಂದಿಸಿದ ಶಾಸಕ ಎಎಸ್ ಪೊನ್ನಣ್ಣ

ಜೆ.ಕೆ ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ: ಅಭಿನಂದಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನು ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಬಳಿಯ ದಿಡ್ಡಳ್ಳಿ ಗ್ರಾಮದ ಜೆ.ಕೆ.ಮುತ್ತಮ್ಮ ಅವರು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಅಭಿನಂದಿಸಿದರು.