ವಿರಾಜಪೇಟೆ:ಪುರಸಭಾ ವ್ಯಾಪ್ತಿಯ ಚರಂಡಿ ಸಮಸ್ಯೆಗೆ ಸ್ಪಂದಿಸಿದ ಎ.ಎಸ್ ಪೊನ್ನಣ್ಣ

ವಿರಾಜಪೇಟೆ: ಪುರಸಭಾ ವ್ಯಾಪ್ತಿಯ ಅರಿಕೇರಿ ವಾರ್ಡ್ 6ರಲ್ಲಿ, ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆಯ ಸಮಸ್ಯೆ ಇದ್ದು, ಇದನ್ನು ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದರು.ಶಾಸಕರಾದ ಎ.ಎಸ್ ಪೊನ್ನಣ್ಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.ಸಾರ್ವಜನಿಕರು ಹಾಗೂ ಪುರಸಭೆ ಪ್ರಮುಖರೊಂದಿಗೆ ಚರ್ಚಿಸಿದ ಶಾಸಕರು ಶೀಘ್ರದಲ್ಲೇ ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷ ಶ್ರೀಮತಿ ದೇಚಮ್ಮ ಕಾಳಪ್ಪ, ಪುರಸಭೆ ವಾರ್ಡ್ ಸದಸ್ಯರಾದ ರಜನಿಕಾಂತ್, ಸ್ಥಾಯಿ ಸಮಿತಿ ಸದಸ್ಯರಾದ ಅಬ್ದುಲ್ ಜಲೀಲ್, ಮತಿನ್ ರಾಫಿ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
What's Your Reaction?






