ವಿರಾಜಪೇಟೆ:ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಎ‌ಎಸ್ ಪೊನ್ನಣ್ಣ

Jun 29, 2025 - 00:54
 0  14
ವಿರಾಜಪೇಟೆ:ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಎ‌ಎಸ್ ಪೊನ್ನಣ್ಣ

ವಿರಾಜಪೇಟೆ:ಕರ್ನಾಟಕ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು, ತನ್ನ ಮಹತ್ವಕಾಂಕ್ಷೆಯ ಡಿಜಿಟಲೀಕರಣ ಆಡಳಿತದ ವ್ಯವಸ್ಥೆಗೆ ಪೂರಕವಾಗಿ, ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ E-ವ್ಯವಹಾರವನ್ನು (ಕಾಗದರಹಿತ ಆಡಳಿತ) ಪ್ರೋತ್ಸಾಹಿಸಲು, ಉಚಿತ ಲ್ಯಾಪ್ ಟಾಪ್ ಅನ್ನು ಒದಗಿಸುತ್ತಿದೆ. ಇದರ ಭಾಗವಾಗಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣವರು, ಕ್ಷೇತ್ರದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.     

ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್,ವಿರಾಜಪೇಟೆ ತಹಶೀಲ್ದಾರ್ ಅನಂತ್ ಶಂಕರ್ ಕೃಷ್ಣ, ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ವಿವಿಧ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0