ವಿರಾಜಪೇಟೆ:ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಎಎಸ್ ಪೊನ್ನಣ್ಣ

ವಿರಾಜಪೇಟೆ:ಕರ್ನಾಟಕ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು, ತನ್ನ ಮಹತ್ವಕಾಂಕ್ಷೆಯ ಡಿಜಿಟಲೀಕರಣ ಆಡಳಿತದ ವ್ಯವಸ್ಥೆಗೆ ಪೂರಕವಾಗಿ, ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ E-ವ್ಯವಹಾರವನ್ನು (ಕಾಗದರಹಿತ ಆಡಳಿತ) ಪ್ರೋತ್ಸಾಹಿಸಲು, ಉಚಿತ ಲ್ಯಾಪ್ ಟಾಪ್ ಅನ್ನು ಒದಗಿಸುತ್ತಿದೆ. ಇದರ ಭಾಗವಾಗಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣವರು, ಕ್ಷೇತ್ರದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್,ವಿರಾಜಪೇಟೆ ತಹಶೀಲ್ದಾರ್ ಅನಂತ್ ಶಂಕರ್ ಕೃಷ್ಣ, ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ವಿವಿಧ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
What's Your Reaction?






