ವಿರಾಜಪೇಟೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ
admincoorgdaily

ವಿರಾಜಪೇಟೆ: ವಿರಾಜಪೇಟೆ ತಾಲ್ಲೂಕಿನ ಹಾತೂರು ವನಭದ್ರಕಾಳಿ ದೇವಸ್ಥಾನದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಮಗುಚಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.