ವಿರಾಜಪೇಟೆ:ಡೊನೇಟರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ವಿರಾಜಪೇಟೆ:ಡೊನೆಟರ್ಸ್ ಚಾರಿಟೇಬಲ್ ಟ್ರಸ್ಟ್ ವಿರಾಜಪೇಟೆ ವತಿಯಿಂದ 70ನೇ ವರ್ಷದ ಕನ್ನಡ ರಾಜ್ಯೋತ್ಸವನ್ನು ಆರಿಸಲಾಯಿತು. ಸಮಾರಂಭ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರಾಜೇಶ್ ಪದ್ಮನಾಭ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಪ್ರಾಸ್ತಾವಿಕವಾಗಿ ಸಂಸ್ಥೆಯ ಗೌರವಾಧ್ಯಕ್ಷರಾದ ಮೊಹಮ್ಮದ್ ರಾಫಿ ಅವರು ಮಾತನಾಡಿ ಕನ್ನಡದ ಮಹತ್ವವನ್ನು ಸಾರಿದರು. ಸಂಸ್ಥೆಯ ಅಧ್ಯಕ್ಷರಾದ ಆಲೀರ ಪವಿಲ್ ಅವರು ಸರ್ವರಿಗೆ ರಾಜ್ಯೋತ್ಸವದ ಶುಭಕೋರಿದರು.ಸಂದರ್ಭದಲ್ಲಿ ಟ್ರಸ್ಟ್ ಸದಸ್ಯರು ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.