ವಿರಾಜಪೇಟೆ; ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ 119 ದಿನಾಚರಣೆ

ವಿರಾಜಪೇಟೆ; ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ 119 ದಿನಾಚರಣೆ

ವಿರಾಜಪೇಟೆ: ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ, ದಮನಿತರ ಶೋಷಿತರ ಆಶಾ ಕಿರಣ, ಸಮ ಸಮಾಜದ ಕಾರಣಕರ್ತರಾದ ಡಾ. ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆಯನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿರಾಜಪೇಟೆ ಡಾ ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಆಚರಿಸಲಾಯಿತು.

ಮೇಲ್ವಿಚಾರಕರಾದ ಸುಮಯ್ಯ ಅವರು ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು. ಸಿಬ್ಬಂದಿಗಳಾದ ಕುಮಾರಿ, ಜ್ಯೋತಿ, ಅನಿತಾ ಹಾಜರಿದ್ದರು.