ಮತವೇ ಪ್ರಜಾಪ್ರಭುತ್ವದ ಶಕ್ತಿ: ಬಿಎಲ್ಒಗಳಿಗೆ ಸಹಕರಿಸಿ,ಶಾಸಕ ಮಂತರ್ ಗೌಡ
ಮಡಿಕೇರಿ, ಜೂನ್ 29: "ಪ್ರಜಾಪ್ರಭುತ್ವದ ಅಡಿಪಾಯ ನಿಮ್ಮ ಮತ. ಜವಾಬ್ದಾರಿ ಮರೆಯಬೇಡಿ" ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ಜೂನ್ 30ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ -SIR ಅಂಗವಾಗಿ ಮನೆ-ಮನೆ ಸಮೀಕ್ಷೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರು ನಗರೂರು ನಿವಾಸದಲ್ಲಿ ಬಿಎಲ್ಒಗಳಿಗೆ ಅಗತ್ಯ ದಾಖಲೆ ಹಾಗೂ ಮಾಹಿತಿ ನೀಡಿ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
"ನಾಗರಿಕರು ಹಾಗೂ ಅರ್ಹ ಮತದಾರರು ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿ -BLOಗಳಿಗೆ ಪೂರ್ಣ ಸಹಕಾರ ನೀಡಿ, ಅಗತ್ಯ ಮಾಹಿತಿ ಒದಗಿಸಿ. ನಿಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಿ" ಎಂದು ಅವರು ಕೋರಿದ್ದಾರೆ.
"ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ, ಪ್ರತಿಯೊಬ್ಬ ನಾಗರಿಕನ ಧ್ವನಿ. ಆ ಧ್ವನಿಗೆ ಶಕ್ತಿ ತುಂಬುವುದು ನಮ್ಮ ಮತ. ನಾವು ಚಲಾಯಿಸುವ ಪ್ರತಿಯೊಂದು ಮತವೂ ದೇಶದ ಭವಿಷ್ಯ ರೂಪಿಸುವ ಪವಿತ್ರ ಕರ್ತವ್ಯ" ಎಂದು ಶಾಸಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
