ಸವ೯ರಪಾಲಿನ ಕಲ್ಯಾಣದ ಬಜೆಟ್ - ಶಾಸಕ ಡಾ.ಮಂತರ್ ಗೌಡ ಶ್ಲಾಘನೆ

ಸವ೯ರಪಾಲಿನ ಕಲ್ಯಾಣದ ಬಜೆಟ್ - ಶಾಸಕ ಡಾ.ಮಂತರ್ ಗೌಡ ಶ್ಲಾಘನೆ

 ಮಡಿಕೇರಿ;ಆರ್ಥಿಕ ಶಿಸ್ತಿನಿಂದ ಕೂಡಿದ ಬಜೆಟ್ ಇದಾಗಿದ್ದು, ತಮ್ಮ ಸುದೀರ್ಘವಾದ 17ನೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ಒದಗಿಸುವ ಮೂಲಕ ಇತರ ಕ್ಷೇತ್ರಗಳಿಗೂ ಸಮಾನ ಆದ್ಯತೆ ನೀಡಿದ್ದಾರೆ ಎಂದು ಶಾಸಕರಾದ ಮಂತರ್ ಗೌಡ ಅವರು ಶ್ಲಾಘಿಸಿದ್ದಾರೆ.

ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಮೂಲಭೂತ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ರಾಜ್ಯದ ಅಭಿವೃದ್ಧಿಗೆ ಬಲ ನೀಡಲಿದೆ ಎಂದು ಡಾ.ಮಂತರ್ ಗೌಡ ಹೇಳಿಕೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಸುದೀರ್ಘ ಮುಖ್ಯಮಂತ್ರಿ ಖ್ಯಾತಿಯ ಸಿದ್ದರಾಮಯ್ಯನವರು ಐತಿಹಾಸಿಕ 17 ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಮಾಡಿದ್ದಾರೆ.

 ಇದು ಅತ್ಯಂತ ಜನಸ್ನೇಹಿ, ರೈತಪರ, ಮಹಿಳಾ ಪರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಆಗಿದೆ.

 ಪ್ರತಿಯೊಂದು ವರ್ಗಕ್ಕೂ ನ್ಯಾಯ ಒದಗಿಸುವ ದೂರದೃಷ್ಟಿ ಬಜೆಟ್ ಆಗಿದೆ. ಈ ಮೂಲಕ ' ಸಕಾ೯ರ ಎಲ್ಲಾ ವಗ೯ದವರ ಹಿತಕಾಯಲು ಬದ್ದ ಎಂದು ನಿರೂಪಿಸಿದೆ

 ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ" ಎಂಬ ನಮ್ಮ ಸರ್ಕಾರದ ಮೂಲ ಆಶಯಕ್ಕೆ ತಕ್ಕಂತೆ ಅತ್ಯುತ್ತಮ ಬಜೆಟ್ ಅನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದೂ ಡಾ.ಮಂತರ್ ಗೌಡ ಶ್ಲಾಘಿಸಿದ್ದಾರೆ.  

ಕೊಡವ ಸಮುದಾಯದ ಪಾಲಿಗೆ ಪ್ರತ್ಯೇಕ ಅಭಿವೖದ್ದಿ ನಿಗಮ ಸ್ಥಾಪನೆಯೂ ಬಹಳ ವಷ೯ಗಳ ಬೇಡಿಕೆಯನ್ನು ಈಡೇರಿಸುವಲ್ಲಿ ಸಫಲವಾಗಿದೆ ಎಂದೂ ಶಾಸಕ ಮಂಥರ್ ಗೌಡ ಹೆಮ್ಮೆ ವ್ಯಕ್ತಪಡಿಸಿದ್ದಾರೆ. .

16 ವರ್ಷಗಳ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಕೂಡ ದೇಶದಲ್ಲಿಯೇ ದಿಟ್ಟ ಹೆಜ್ಜೆಯಾಗಿದ್ದು, ಮಕ್ಕಳ ಕೈಯಲ್ಲಿ ಮೊಬೈಲ್ ನಿಂದ ಉಂಟಾಗಿರುವ ಅನಾಹುತಗಳ ತಡೆಗೆ ಈ ಕ್ರಮ ಸಕಾಲಿಕವಾಗಿದೆ. , ಮಕ್ಕಳ ಕೈಯಲ್ಲಿ ಮೊಬೈಲ್ ಬದಲಿಗೆ ಪುಸ್ತಕ ಕೊಡಿ ಎಂಬ ಆಂದೋಲನಕ್ಕೆ ಇದು ಸಹಕಾರಿಯಾಗಿದೆ.

  ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ  

 ಕೃಷಿ ಪಂಪ್ ಸೆಟ್ಗಳಿಗೆ 10 ಅಶ್ವಶಕ್ತಿವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ 19,290 ಕೋಟಿ ರೂ. ಮೀಸಲಿಡುವ ಮೂಲಕ ಮುಖ್ಯಮಂತ್ರಿಗಳು ರೈತರ ಕುರಿತಾಗಿ ಇರುವ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ

 

ಅಂಗನವಾಡಿ ಕೇಂದ್ರಗಳ ಸಮಗ್ರ ಅಭಿವೃದ್ಧಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವ ನಿರ್ಧಾರ ಮಹತ್ವದ್ದಾಗಿದೆ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪೌಷ್ಠಿಕ ಆಹಾರ ಒದಗಿಸುವ ಯೋಜನೆ ಪುನಃ ಆರಂಭಿಸುವುದು ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ದೊಡ್ಡ ಸಹಾಯವಾಗಲಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೋಡಿ ಸಮವಸ್ತ್ರ ನೀಡುವ ನಿರ್ಧಾರವೂ ಶ್ಲಾಘನೀಯ  

UKP-III ರಡಿ ಮುಳುಗಡೆಯಾಗುವ ಖುಷ್ಠಿ ಜಮೀನಿಗೆ ಎಕರೆಗೆ 30 ಲಕ್ಷ, ತರಿ ಜಮೀನಿಗೆ ಎಕರೆಗೆ 40 ಲಕ್ಷ ನಿಗದಿ; ಒಪ್ಪಂದದಡಿ ಭೂಸ್ವಾಧೀನ ಪ್ರಕ್ರಿಯೆಗೆ ಚಾಲ್ತಿ, ಸೇರಿದಂತೆ ನೀರಾವರಿ, ಹಿಂದುಳಿದ ವರ್ಗ, ಶೋಷಿತರ ವರ್ಗಗಳಿಗೆ ನೆರವು ಬಜೆಟ್ ಇದಾಗಿದೆ.

ಅಬಕಾರಿ ಇಲಾಖೆಯಲ್ಲಿ ನಾವು ಕೈಗೊಂಡಿರುವ ಸುಧಾರಣೆಯ ಅಂಶಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದ್ದು, ಹೊಸ ಅಬಕಾರಿ ಕಾಯ್ದೆ ಜಾರಿ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಸೋರಿಕೆ ತಡೆಗಟ್ಟಲು ಡಿಜಿಟಲ್ ಟ್ಯ್ರಾಕಿಂಗ್, ಡಿಜಿಟಲ್ ಲಾಕ್ ವ್ಯವಸ್ಥೆ, ದರ ನಿಗದಿಯ ಸ್ಲ್ಯಾಬ್ಗಳನ್ನು ತರ್ಕಬದ್ದಗೊಳಿಸಲು 16 ರಿಂದ 8ಕ್ಕೆ ಇಳಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಈಗಾಗಲೇ ಇಲಾಖೆಯ ವರ್ಗಾವಣೆಯಲ್ಲಿ ಕೌನ್ಸೆಲಿಂಗ್ ಜಾರಿಗೆ ತಂದಿದ್ದು ಇನ್ಮುಂದೆ ಅಬಕಾರಿ ಅಧೀಕ್ಷಕರು ಹಾಗೂ ಉಪ ಅಧೀಕ್ಷಕರುಗಳ ವರ್ಗಾವಣೆ ಕೂಡ ಆನ್ಲೈನ್ ಕೌನ್ಸೆಲಿಂಗ್ ವ್ಯಾಪ್ತಿಗೆ ತರುವುದಾಗಿ ಹೇಳಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ಮತ್ತು ಪಾರದರ್ಶಕತೆ ತರಲು ಬಜೆಟ್ನಲ್ಲಿ ಘೋಷಣೆ ಮಾಡಿದ್ದೇವೆ.ಗಿದೆ

  ರಾಜ್ಯಾದ್ಯಂತ ಏತ ನೀರಾವರಿ, ಚೆಕ್ಡ್ಯಾಂ ಹಾಗೂ ಕೆರೆಗಳ ಪುನಶ್ಚೇತನದ ಕಾಮಗಾರಿಗಳಿಗೆ ಬರೋಬ್ಬರಿ 1,793 ಕೋಟಿ ರೂ. ಮೀಸಲಿಟ್ಟಿರುವುದು ಐತಿಹಾಸಿಕ ಹೆಜ್ಜೆ. ರಾಜ್ಯದ ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕವಾಗಿ 10 ಕೋಟಿ ರೂ. ವೆಚ್ಚದಲ್ಲಿ 'ಕರ್ನಾಟಕ ಕ್ವಾಂಟಮ್ ರೋಡ್ಮ್ಯಾಪ್' ಜಾರಿಗೊಳಿಸಲಾಗುತ್ತಿದೆ. ಇದು ಕೂಡ ರಾಜ್ಯದ ಹಿತದೖಷ್ಟಿಯಿಂದ ದಾಖಲಾಹ೯..  

ಕೃತಕ ಬುದ್ಧಿಮತ್ತೆಯಲ್ಲಿನ ತ್ವರಿತ ಪ್ರಗತಿಗಳು ಜಾಗತಿಕ ಉತ್ಪಾದನಾ ವ್ಯವಸ್ಥೆಗಳು ಮತ್ತು ಆರ್ಥಿಕ ರಚನೆಗಳನ್ನು ಮರುರೂಪಿಸುತ್ತಿವೆ ಎಂಬುದನ್ನು ಗುರುತಿಸಿ, ಕೃಷಿ, ಶಿಕ್ಷಣ, ಆಡಳಿತ ಮತ್ತು ಕೌಶಲ್ಯ ಅಭಿವೃದ್ಧಿಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಎಐ ಅನ್ನು ಸಂಯೋಜಿಸಲು ಸರ್ಕಾರವು ಸಮಗ್ರ ಕಾರ್ಯತಂತ್ರವನ್ನು ರೂಪಿಸಿದೆ.

ಕೃಷಿ ಕ್ಷೇತ್ರದಲ್ಲಿ: ರೈತರಿಗೆ ಹವಾಮಾನ, ಮಾರುಕಟ್ಟೆ ಬೆಲೆಗಳು, ಬೆಳೆ ಸಲಹೆ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿಯನ್ನು ತ್ವರಿತವಾಗಿ ಮತ್ತು ವಿಶ್ವಾಸಾರ್ಹವಾಗಿ ಒದಗಿಸಲು ಸರ್ಕಾರವು ರೈತ ಸಂಪರ್ಕ ಕೇಂದ್ರವನ್ನು ಎಐ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಲಿದೆ. ಈ ಮೂಲಕ ಕೖಷಿಕ್ಷೇತ್ರದಲ್ಲಿಯೂ ಕ್ರಾಂತಾಕಾರಿ ಹೆಜ್ಜೆಯನ್ನಿರಿಸಲಾಗಿದೆ ಎಂದೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.