ಕಾಡಾನೆ ದಾಳಿ :ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಎ.ಎಸ್ ಪೊನ್ನಣ್ಣ

Jun 5, 2026 - 16:09
 0  661
ಕಾಡಾನೆ ದಾಳಿ :ಗಾಯಾಳುಗಳ ಆರೋಗ್ಯ ವಿಚಾರಿಸಿದ  ಶಾಸಕ ಎ.ಎಸ್ ಪೊನ್ನಣ್ಣ

ಗೋಣಿಕೊಪ್ಪ:ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ತಮ್ಮ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ, ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಎಂಬುವರ ಮೇಲೆ ಹಾಗೂ ಇತರ ನಾಲ್ಕು ಮಂದಿಯ ಮೇಲೆ ಕಾಡಾನೆ ಅಚಾನಕ್ ದಾಳಿ ನಡೆಸಿದೆ. ಆನೆ ದಾಳಿಗೆ ಒಳಗಾಗಿ ಗಾಯಗೊಂಡವರನ್ನು ಲೋಪಾಮುದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ, ಸಂಧ್ಯಾ ಅವರು ದಾಳಿಯ ತೀವ್ರತೆಯಿಂದ ಮೃತಪಟ್ಟರು.

ಆಸ್ಪತ್ರೆಯಲ್ಲಿದ್ದ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲಿರ ರಶೀದ್, ಪ್ರಮುಖರು ಸೂರಜ್ ಹೊಸೂರು, ರಾಜು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0