ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ - ನಮ್ಮ ವೇದಿಕೆ ಸಾಂಸ್ಕೖತಿಕ ಸ್ಪಧೆ೯: ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ - ಡಾ. ಉದಯಶಂಕರ್

ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ - ನಮ್ಮ ವೇದಿಕೆ ಸಾಂಸ್ಕೖತಿಕ ಸ್ಪಧೆ೯:   ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ - ಡಾ. ಉದಯಶಂಕರ್

ಮಡಿಕೇರಿ ನ.09 - ಸಾಹಿತ್ಯಕ್ಕೆ ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿಯಿದ್ದು ಸಾಹಿತ್ಯಾಭಿರುಚಿ ಇಲ್ಲದವನು ಪ್ರಾಣಿಗಳಿಗೆ ಸಮಾನ ಎಂದು ವೈದ್ಯ ಸಾಹಿತಿ ಡಾ. ನಡಿಬೈಲು ಉದಯಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಓಂಕಾರಸದನದಲ್ಲಿ ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದ ವತಿಯಿಂದ ಆಯೋಜಿತ ನಿಮ್ಮ ಪ್ರತಿಭೆ - ನಮ್ಮ ವೇದಿಕೆ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಡಾ. ಉದಯಶಂಕರ್, ಸಾಹಿತ್ಯ ಪ್ರೀತಿಯಿಂದ ಉತ್ತಮ ಗುಣಗಳನ್ನು ಹೊಂದಲು ಸಾಧ್ಯವಿದೆ. ಹೀಗಾಗಿ ಸಾಹಿತ್ಯಾಸಕ್ತಿಯುಳ್ಳವನು ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾನೆ ಎಂದರು.

ಶ್ರೀಮಂತ ಸಂಸ್ಕೖತಿ, ಸಾಹಿತ್ಯವನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ಪರಿಣಿತಿ ಹೊಂದಿದ ಅನೇಕರು ವಿಶ್ವವ್ಯಾಪಿ ಗಣ್ಯ ಸ್ಥಾನ ಹೊಂದಿದ್ದಾರೆ. ಕನ್ನಡ ನಾಡಿನ ಸಮಥ೯ರು ಸಾಹಿತ್ಯ, ಕ್ರೀಡೆ, ರಾಜಕೀಯ, ಸಾಮಾಜಿಕ, ಸಾಂಸ್ಕೖತಿಕ ರಂಗದಲ್ಲಿಯೂ ಖ್ಯಾತಿ ಪಡೆದಿದ್ದಾರೆ ಎಂದು ಹೇಳಿದರು. ಸಾಹಿತ್ಯದ ಗೊಡವೆ ಹೊಂದಿಲ್ಲದಿದ ಮುಂದಿನ ಪೀಳಿಗೆ ಬಗ್ಗೆ ಆತಂಕವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಕರುನಾಡಿನ ಸಾಹಿತ್ಯ, ಸಾಂಸ್ಕೖತಿಕ ಮಹತ್ವ ತಿಳಿಸುವಲ್ಲಿ ಇಂಥ ಸಾಂಸ್ಕೖತಿಕ ಪ್ರತಿಭಾ ವೇದಿಕೆಗಳು ಅಗತ್ಯ ಎಂದೂ ಡಾ. ನಡಿಬೈಲು ಉದಯಶಂಕರ್ ಅಭಿಪ್ರಾಯಪಟ್ಟರು.

ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಬಿ. ರಾಘವ ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚು ಜನ ಬಳಕೆ ಮಾಡುವ ಭಾಷೆಯಾಗಿ ಕನ್ನಡಕ್ಕೆ 29 ನೇ ಸ್ಥಾನವಿದೆ. ಸಾವಿರಾರು ವಷ೯ಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ನಾವೆಲ್ಲಾ ಹೆಚ್ಚು ಬಳಕೆ ಮಾಡುವ ಮೂಲಕ ಕನ್ನಡದ ಸಂರಕ್ಷಣೆಗೆ ಮುಂದಾಗಬೇಕೆಂದು ಕರೆ ನೀಡಿದರು. ಇತ್ತಚಿನ ಸಿನಿಮಾಗಳಲ್ಲಿ ಕನ್ನಡ ಭಾಷೆಯ ಬಳಕೆ ಸಮಪ೯ಕವಾಗಿ ಆಗದೇ ಕನ್ನಡದ ಕಗ್ಗೊಲೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕಾಗಿದೆ ಎಂದೂ ಅವರು ಹೇಳಿದರು. ಇಂಗ್ಲೀಷ್ ಮಾಧ್ಯಮದ ಶಾಲೆಗಳಲ್ಲಿಯೂ ಕನ್ನಡ ಭಾಷೆಯ ಬಳಕೆ ಹೆಚ್ಚಾಗುವ ಮೂಲಕ ಮಕ್ಕಳಲ್ಲಿ ಕನ್ನಡದ ಮಹತ್ವದ ಅರಿವಾಗಬೇಕೆಂದೂ ರಾಘವ ಸಲಹೆ ನೀಡಿದರು.ವಿದ್ಯಾಥಿ೯ಗಳಿಗಾಗಿನ ಸಾಂಸ್ಕೖತಿಕ ಕಾಯ೯ಕ್ರಮಗಳು ಸ್ಪಧೆ೯ಗಳಾಗದೇ ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರಲು ಸೂಕ್ತ ವೇದಿಕೆಯಾಗಬೇಕೆಂದೂ ರಾಘವ ಕಿವಿಮಾತು ಹೇಳಿದರು. 

ಸಮಥ೯ ಕನ್ನಡಿಗರು ಸಂಸ್ಥೆಯ ರಾಜ್ಯ ಪ್ರಧಾನ ಸಂಚಾಲಕ ಆನಂದ್ ದೆಗ್ಗನಹಳ್ಳಿ ಮಾತನಾಡಿ, 2017 ರಲ್ಲಿ ಸ್ಥಾಪಿಸಲ್ಪಟ್ಟ ಸಮಥ೯ ಕನ್ನಡಿಗರು ಸಂಸ್ಥೆ ರಾಜ್ಯವ್ಯಾಪಿ ನೂರಾರು ಕಾಯ೯ಕ್ರಮಗಳ ಮೂಲಕ ಸಾಂಸ್ಕೖತಿಕ ಮತ್ತು ಸಾಹಿತ್ಯ ಪ್ರೀತಿಯನ್ನು ಜನರಲ್ಲಿ ಮೂಡಿಸುವ ಕೆಲಸ ಮಾಡತ್ತಿದೆ ಎಂದು ಮಾಹಿತಿ ನೀಡಿದರು. ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದ ಸಂಚಾಲಕಿ ಕೆ. ಜಯಲಕ್ಷ್ಮಿ ಮಾತನಾಡಿ, ಕಳೆದ 8 ವಷ೯ಗಳಿಂದ ಕೊಡಗಿನಲ್ಲಿ 14 ಪ್ರಮುಖ ಕಾಯ೯ಕ್ರಮಗಳನ್ನು ಸಂಸ್ಥೆಯಿಂದ ಆಯೋಜಿಸಲಾಗಿದೆ ನೂರಾರು ಪ್ರತಿಭೆಗಳಿಗೆ ವೇದಿಕೆ ನೀಡಲಾಗಿದೆ.

ಹೀಗಿದ್ದರೂ ಸಾವ೯ಜನಿಕವಾಗಿ ಇಂಥ ಪ್ರತಿಭಾ ಪ್ರದಶ೯ನ ಕಾಯ೯ಕ್ರಮಗಳಿಗೆ ಸಾವ೯ಜನಿಕರಿಂದ ಮತ್ತಷ್ಟು ಪ್ರೋತ್ಸಾಹ ಅಗತ್ಯ ಎಂದು ಮನವಿ ಮಾಡಿದರು. ಸಮಥ೯ ಕನ್ನಡಿಗರು ಸಂಸ್ಥೆಯ ಸದಸ್ಯೆ ಸವಿತಾ ರಾಕೇಶ್ ಸ್ವಾಗತಿಸಿ, ಶಾಂತಿ ಅಚ್ಚಯ್ಯ ವಂದಿಸಿದರು. ಕಾಯ೯ಕ್ರಮದಲ್ಲಿ ಪುಟಾಣಿ ಮಕ್ಕಳಿಂದ ಛದ್ಮವೇಷ ಸ್ಪಧೆ೯, ಚಿತ್ರಕಲೆ, ಗೀತೆ, ಸಮೂಹ ನೖತ್ಯ ಮುಂತಾದ ಸ್ಪಧೆ೯ಗಳು ಆಕಷಿ೯ಸಿದವು.