ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆ

ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಸಾರ್ವರ್ತಿಕ ಮುಷ್ಕರದ ಹಿನ್ನಲೆಯಲ್ಲಿ ಮಡಿಕೇರಿ ಹಾಗೂ ಸೋಮವಾರಪೇಟೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಯಿಂದ ಮಡಿಕೇರಿಯಲ್ಲಿ ಶಿರಸ್ತೇದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸರ್ಕಾರಕ್ಕೆ ಸಲ್ಲಿಸಲು ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಿದರು.

ಈ ಸಂದರ್ಭ ಮಡಿಕೇರಿ ತಾಲೂಕು ಅಧ್ಯಕ್ಷರಾದ ಪವಿತ್ರ ಸಿ ಯು,ಕಾರ್ಯದರ್ಶಿ ಆಶಾಲತಾ ಎಂ, ಉಪಾಧ್ಯಕ್ಷೆ ವನಜ,ಕ್ಷೇಮ ನಿಧಿ ಅಧ್ಯಕ್ಷೆ ಸುಮತಿ, ಸೋಮಾರಪೇಟೆಯ ಅಧ್ಯಕ್ಷರಾದ ಧನಲಕ್ಷ್ಮಿ,ಕಾರ್ಯದರ್ಶಿ ತಾರಲೋಬೋ ಹಾಗೂ ಮಡಿಕೇರಿ ತಾಲೂಕು ಮತ್ತು ಸೋಮವಾರಪೇಟೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.