ಚೆಟ್ಟಿಮಾನಿ: ಎಲ್.ಕೆ.ಜಿ ಪ್ರಾರಂಭೋತ್ಸವ ಕಾರ್ಯಕ್ರಮ ಮತ್ತು ಬೀಳ್ಕೊಡುಗೆ ಸಮಾರಂಭ

ಚೆಟ್ಟಿಮಾನಿ: ಅಂಗನವಾಡಿಯಲ್ಲಿ ಎಲ್ ಕೆ ಜಿ ಪ್ರಾರಂಭೋತ್ಸವ ಕಾರ್ಯಕ್ರಮ, ಸಿಂಗತೂರು ಅಂಗನವಾಡಿ ಕಾರ್ಯಕರ್ತೆ ರಾಧ, ನವೋದಯ ಅಂಗನವಾಡಿ ಸಹಾಯಕಿ ಜಾನಕಿ,ಕೊಚ್ಚಿ ಅಂಗನವಾಡಿ ಸಹಾಯಕಿ ರೋಸಮ್ಮ ರವರಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು.
ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ರವರು ಪ್ರಸ್ತಾವಿಕವಾಗಿ ಮಾತನಾಡಿ, ಎಲ್ ಕೆ ಜಿ ಯನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಿರುವುದು ಇಲಾಖೆ ಅತ್ಯುತ್ತಮ ಯೋಜನೆಯಲ್ಲಿ ಒಂದಾಗಿದೆ. ಆಂಗ್ಲ ಭಾಷೆ ಶಿಕ್ಷಣವನ್ನು ಅಂಗನವಾಡಿಯಲ್ಲಿ ಎಲ್ ಕೆ ಜಿ ಮೂಲಕ ಬಡ ಮಕ್ಕಳಿಗೆ ಒದಗಿಸುವುದರಿಂದ ಮಕ್ಕಳ ಭವಿಷ್ಯ ಮತ್ತಷ್ಟು ಉತ್ತಮ ಪಡಿಸಲು ಸಹಕಾರಿ ಆಗುತ್ತದೆ.
ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ದಿನೇಶ್, ಸದಸ್ಯರು ಹ್ಯಾರಿಸ್ ಮತ್ತು ಫಲಾನುಭವಿಗಳೊಂದಿಗೆ ಪ್ರಾರಂಭೋತ್ಸವ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಅದರಂತೆ ಈ ದಿನ ಗ್ರಾಮ ಪಂಚಾಯತಿ ವತಿಯಿಂದ ಸಮವಸ್ತ್ರ, ಅಶ್ವಿನಿ ಯೋಗಿನಿ ಅವರಿಂದ ಮಕ್ಕಳಿಗೆ ಚೇರ್, ಕೇದಂಬಾಡಿ ಯಮುನಾ ಕುಸುಮರವರಿಂದ ಮಕ್ಕಳಿಗೆ ಸ್ವೆಟರ್ ಮತ್ತು ಕ್ಯಾಪ್, ಕೆದಂಬಾಡಿ ವರದರಾಜರವರಿಂದ ಟೇಬಲ್, ಕೆದಂಬಾಡಿ ರುಕ್ಮಿಣಿ, ಪೂಣಚ್ಚ,ಭವಿತ್, ಹೇಮಲತಾ, ನಯನ, ರವರಿಂದ ಆಟಿಕೆಗಳಿಗಾಗಿ ಹಣ ಸಹಾಯ, ಕೆದಂಬಾಡಿ ರುಕ್ಮಿಣಿ ನಂಜಪ್ಪ ಅವರಿಂದ ಚೇರ್ ಮತ್ತು ಆಟಿಕೆ ಗಳನ್ನು ಕೊಡುಗೆಯಾಗಿ ಪಡೆಯಲಾಗಿದ್ದು ಅವರೆಲ್ಲರಿಗೂ ಇಲಾಖೆ ಪರವಾಗಿ ಧನ್ಯವಾದಗಳು ಅರ್ಪಿಸಿದರು. ಮಾದರಿಯಾಗಿ ಎಲ್ ಕೆ ಜಿ ಕೇಂದ್ರವನ್ನಾಗಿ ಚೆಟ್ಟಿಮಾನಿ ಅಂಗನವಾಡಿಯನ್ನು ಪರಿವರ್ತಿಸುವಲ್ಲಿ ಶ್ರೀಮತಿ ಸುಶೀ ಅಂಗನವಾಡಿ ಕಾರ್ಯಕರ್ತೆ, ಶ್ರೀಮತಿ ಯೋಗಿತಾ ಅಂಗನವಾಡಿ ಕಾರ್ಯಕರ್ತೆ ಇವರು ಶ್ರಮಿಸಿದ್ದು ಇವರಿಗೆ ಅಭಿನಂದನೆ ಸಲ್ಲಿಸಿದರು.
ಶಿಶು ಅಭಿವೃದ್ಧಿ ಯೋಚನಾಧಿಕಾರಿ ಸೀತಾಲಕ್ಷ್ಮಿ ಅವರು ಮಾತನಾಡಿ, ಅಂಗನವಾಡಿ ಪ್ರಾರಂಭವಾಗಿ 50 ವರ್ಷ ತುಂಬಿದ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಪ್ರಾರಂಭವಾಗುತ್ತಿದೆ.ಮಡಿಕೇರಿ ತಾಲೂಕಿಗೆ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಪ್ರಥಮ ಹಂತದಲ್ಲಿ ಪ್ರಾರಂಭವಾಗುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಹ್ಯಾರಿಸ್ ರವರು ಮಾತನಾಡಿ, ಯಾವುದೇ ಯೋಜನೆಗಳನ್ನು ಇಲಾಖೆ ತಂದರು ನಮ್ಮ ಗ್ರಾಮ ಪಂಚಾಯತಿಯ ಅಂಗನವಾಡಿ ಕಾರ್ಯಕರ್ತೆಯರು ಬಹಳ ಶಿಸ್ತಿನಿಂದ ಯೋಜನೆಯ ಯಶಸ್ವಿಗೆ ಶ್ರಮಿಸುತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು. ಈ ಹೊಸ ಆಲೋಚನೆಗೆ ಗ್ರಾಮ ಪಂಚಾಯತಿಯ ಮತ್ತು ವೈಯಕ್ತಿಕ ಸಹಕಾರ ಸದಾ ಇರುವುದಾಗಿ ತಿಳಿಸಿದರು. ಗ್ರಾಮ್ ಪಂಚಾಯಿತಿ ಅಧ್ಯಕ್ಷರಾದ ದಿನೇಶ್ ರವರು ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಕೊಠಡಿಯ ಬೇಡಿಕೆಯನ್ನು ಸಲ್ಲಿಸಿದ ಸಲ್ಲಿಸಿದ್ದು ಅದನ್ನು ನೆರವೇರಿಸುವುದಾಗಿ ತಿಳಿಸಿದರು. ಮಾದರಿ ಎಲ್ ಕೆ ಜಿ ಕೇಂದ್ರವಾಗಿ ಚೆಟ್ಟಿಮಾನಿ ಕೇಂದ್ರವನ್ನು ಮಾರ್ಪಾಡಲಿಸಲು ಗ್ರಾಮ್ ಪಂಚಾಯತಿ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಹೇಮಲತಾ ರವರು ಭಾಗಮಂಡಲ ವೃತ್ತದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹಾಜರಿದ್ದರು. ಕಾರ್ಯಕ್ರಮದ ಪ್ರಾರ್ಥನೆ ಸಹಾಯಕಿ ವಾಸಂತಿ, ನಿರೂಪಣೆ ಕೋಡಿಮಟ್ಟೆ ಅಂಗನವಾಡಿ ಕಾರ್ಯಕರ್ತೆ ಮಾಲತಿ, ಸ್ವಾಗತ ಚೆಟ್ಟಿಮಾನಿ ಅಂಗನವಾಡಿ ಕಾರ್ಯಕರ್ತೆ ಸುಶಿ, ವಂದನಾರ್ಪಣೆ ಪದಕಲ್ಲು ಅಂಗನವಾಡಿ ಕಾರ್ಯಕರ್ತೆ ಯೋಗಿತಾರವರು ನೆರವೇರಿಸಿದರು.