ಕಾಂಗ್ರೆಸ್ ಮುಖಂಡರಿಂದ ಧರ್ಮಜ ಉತ್ತಪ್ಪ ನವರಿಗೆ ಅಭಿನಂದನೆ ಸಲ್ಲಿಕೆ
admincoorgdaily

ಮಡಿಕೇರಿ;
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಹಿನ್ನಲೆ ಕೊಡಗು ಕಾಂಗ್ರೆಸ್ ಮುಖಂಡರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ನವರನ್ನು ಶಾಲು ಹೊದಿಸಿ ಹಾರ ಹಾಕಿ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ರವರು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಎರಡನೇ ಬಾರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಮುಂದುವರಿಸುವಾಗ ಅವರ ಸಾಧನೆಗಳನ್ನು,
ಕಾರ್ಯ ಕ್ಷಮತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತದೆ.ಈ ನಿಟ್ಟಿನಲ್ಲಿ ಧರ್ಮಜ ಉತ್ತಪ್ಪನವರು ಅವಕಾಶ ಪಡೆದಿದ್ದು ಅವರ ಸಾಧನೆ ದೊರೆತ ಪ್ರತಿಫಲವಾಗಿದೆ.
ಮುಂದಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ವಿಭಾಗಗಳಲ್ಲಿ ಜಯಗಳಿಸಲಿ ಎಂದು ಶುಭಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್,ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ,
ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಶೌಕತ್ ಆಲಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್,ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್,
ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ನೆರವಂಡ ಉಮೇಶ್,ಡಿ.ಸಿ.ಸಿ ಸದಸ್ಯರಾದ ಪುಷ್ಪ ಪೂಣಚ್ಚ,
ಪ್ರಮುಖರಾದ ಹಂಚೆಟ್ಟಿರ ಮನು ಮುದ್ದಪ್ಪ, ಹೊಸೂರು ರವಿರಾಜ್ ,ರಘು,
ಶಾಹಿದ್ ಬಾದಶಾ,ಹ್ಯಾರಿಸ್,ಅಶ್ರಫ್,ಸಲೀಂ,ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದು ಅಧ್ಯಕ್ಷರಿಗೆ ಶುಭಾಶಯ ಕೋರಿದರು.