ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಕುಶಾಲನಗರ ತಾಲೂಕು ಘಟಕದಲ್ಲಿ ಕೊರವಂಡ ಪೊನ್ನಪ್ಪ ವಸಂತಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದು, ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.೨೫ ಸಾವಿರ ಮೊತ್ತದ ಚೆಕ್ ಅನ್ನು ಗುರುವಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ. ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ. ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.