ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ

ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ

ಮಡಿಕೇರಿ:ಕೊಡಗು ಜಿಲ್ಲಾ ಪತ್ರಕರ್ತರ ಸಂಘ ( ರಿ) ಸಹಯೋಗದಲ್ಲಿ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘ ದಿಂದ ಕಥೆ ಹೇಳುವ ಸ್ಪರ್ಧೆ ಆಯೋಜಿಸಲಾಗಿದೆ. ಆಗಸ್ಟ್ 3 ರಂದು ಭಾನುವಾರ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರನ್ನು ಜುಲೈ 25 ರೊಳಗಾಗಿ ನೊಂದಾಯಿಸಿಕೊಳ್ಳಲು. 

ಸಂಪರ್ಕಿಸಬೇಕಾದ ಸಂಖ್ಯೆಗಳು: 9353531976  7760908774