ಅತ್ತೂರು ಕೊಲ್ಲಿ:ಅರಣ್ಯ ನಿವಾಸಿಗಳ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತಂದು ಶೀಘ್ರದಲ್ಲೇ ಪರಿಹಾರ: ಎ.ಎಸ್ ಪೊನ್ನಣ್ಣ

Jun 22, 2025 - 14:55
 0  61
ಅತ್ತೂರು ಕೊಲ್ಲಿ:ಅರಣ್ಯ ನಿವಾಸಿಗಳ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತಂದು ಶೀಘ್ರದಲ್ಲೇ ಪರಿಹಾರ: ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ:ವಿರಾಜಪೇಟೆ ವಿಧಾನಸಭೆಯ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಕೊಲ್ಲಿ ಹಾಡಿಗೆ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ ರವರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತನಾಡಿದರು.

    ಈ ಹಿಂದೆ ಅರಣ್ಯ ಇಲಾಖೆಯ ಕೆಲವು ಕಾನೂನಾತ್ಮಕ ಪ್ರಕ್ರಿಯೆಗಳಿಂದ ಈ ಹಾಡಿಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಬಳಿಕ ಅರಣ್ಯ ನಿವಾಸಿಗಳು, ತಾವು ವಾಸಿಸುವ ಜಾಗದ ಬಗ್ಗೆ ತಮ್ಮ ಹಕ್ಕನ್ನು ಇಲಾಖೆ ಹಾಗೂ ಸರಕಾರದೊಂದಿಗೆ ಪ್ರತಿಪಾದಿಸಿದರು. ಈ ಕುರಿತು ಇನ್ನೂ ತೀರ್ಮಾನವಾಗದಿದ್ದರೂ ಕೆಲವು ನಿವಾಸಿಗಳು ಆತಂಕಗೊಂಡಿರುವುದನ್ನು ಅರಿತ ಶಾಸಕರು, ಇಂದು ಸ್ಥಳಕ್ಕೆ ಭೇಟಿ ನೀಡಿ ನಿವಾಸಿಗಳಿಗೆ ಭರವಸೆಯನ್ನು ನೀಡಿದರು.     

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮಾನ್ಯ ಶಾಸಕರು, ಅರಣ್ಯ ನಿವಾಸಿಗಳ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತಂದು ಅತಿ ಶೀಘ್ರದಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು. ಈ ಸಮಸ್ಯೆ ಸರಕಾರ ಮಟ್ಟದಲ್ಲಿ ಇತ್ಯರ್ಥ ಆಗುವ ತನಕ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ನಿವಾಸಿಗಳು ಸಹ, ತಾವು ಈಗ ವಾಸಿಸುತ್ತಿರುವ ವಿವಾದಿತ ಜಾಗದಲ್ಲಿ ಯಾವುದೇ ರೀತಿಯ ಹೊಸ ನಿರ್ಮಾಣ ಕಾರ್ಯಕ್ಕೆ ಮುಂದಾಗದಂತೆ ಕಿವಿಮಾತು ಹೇಳಿದರು. ಹೊರಗಿನವರ ಪ್ರವೇಶದ ಬಗ್ಗೆಯೂ ಜಾಗರೂಕರಾಗಿರುವಂತೆ ನಿವಾಸಿಗಳನ್ನು ಕೇಳಿಕೊಂಡರು.     

ಈ ಸಂದರ್ಭದಲ್ಲಿ ರಾಜ್ಯ ಅರಣ್ಯ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ವಲಯ ಕಾಂಗ್ರೆಸ್ ಅಧ್ಯಕ್ಷರುಗಳಾದ ಚಿಮ್ಮಣ್ಣಮಾಡ ರವಿ, ಕಟ್ಟಿ ಕಾರ್ಯಪ್ಪ, ಪಲ್ವಿನ್ ಪೂಣಚ್ಚ, ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರಿತೀಶ್, ಅಜ್ಜಿಕುಟ್ಟಿರ ಗಿರೀಶ್, ಅರಣ್ಯ, ಪೊಲೀಸ್, ಐಟಿಡಿಪಿ ಅಧಿಕಾರಿಗಳು, ಹಾಡಿ ಮುಖಂಡರು ಹಾಗು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು

.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0