ಅನಾಹುತಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬ: ಚೆಸ್ಕಾಂ ನಿರ್ಲಕ್ಷ್ಯ

ಕುಶಾಲನಗರ: ಕುಶಾಲನಗರದ ಪುರಸಭಾ ವ್ಯಾಪ್ತಿಯ ಗುಮ್ಮನಕೊಲ್ಲಿ ಬಳಿ ಚೆಸ್ಕಾಂ ನಿರ್ಲಕ್ಷ್ಯದಿಂದ ವಿದ್ಯುತ್ ಕಂಬವೊಂದು ಅನಾಹುತಕ್ಕೆ ಆಹ್ವಾನ ನೀಡುತ್ತಿದ್ದು, ಕೂಡಲೇ ಈ ಬಗ್ಗೆ ಚೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗುಮ್ಮನಕೊಲ್ಲಿಯ ಮುಖ್ಯರಸ್ತೆಯಿಂದ ಓಂ ಕಾರೇಶ್ವರ ಬಡಾವಣೆಗೆ ತೆರಳುವ ರಸ್ತೆಯ ಬಳಿ ವಿದ್ಯುತ್ ಕಂಬ ದುಸ್ಥಿತಿಯಲ್ಲಿದೆ. ಚೆಸ್ಕಾಂ ಈ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ವಿದ್ಯುತ್ ಕಂಬ ಚರಂಡಿಯಲ್ಲಿ ಅಳವಡಿಸಲಾಗಿದ್ದು, ನೀರಿನ ಹರಿವಿನಿಂದ ಕಂಬ ದುಸ್ಥಿತಿಯಲ್ಲಿದೆ. ಗಾಳಿಗೆ ಅಲುಗಾಡುತ್ತಿರುವ ವಿದ್ಯುತ್ ಕಂಬ ಯಾವ ಸಂದರ್ಭದಲ್ಲಿ ಬೇಕಾದರೂ ಬೀಳುವಂತಿದ್ದು, ಕೂಡಲೇ ಈ ಬಗ್ಗೆ ಚೆಸ್ಕಾಂ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಬಸವೇಶ್ವರ ಬಡಾವಣೆ ನಿವಾಸಿ ಮಣಿರವರು ಆಗ್ರಹಿಸಿದ್ದಾರೆ.
ಹಾಗೆಯೇ ವಿದ್ಯುತ್ ಕಂಬದ ಬಳಿ ರಸ್ತೆ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ರಾತ್ರಿ ವೇಳೆ ವಾಹನಗಳು ಚರಂಡಿಗೆ ಬಿದ್ದು ಅನಾಹುತ ಸಂಭವಿಸುತ್ತಿವೆ. ಈ ಬಗ್ಗೆ ಸಂಬಂಧಿಸಿದ ಪುರಸಭೆ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಈ ಬಗ್ಗೆ ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ ಪುರಸಭೆ ಮುಂಭಾಗ ಧರಣ ನಡೆಸಲಾಗುವುದು ಎಂದು ಸ್ಥಳೀಯ ನಿವಾಸಿ ಮೋನಿ ಎಚ್ಚರಿಕೆ ನೀಡಿದ್ದಾರೆ.
What's Your Reaction?






