ಇಸ್ಮಾಯಿಲ್ ಕಂಡಕರೆಗೆ ಪ್ರಶಸ್ತಿ

May 6, 2025 - 22:27
 0  29
ಇಸ್ಮಾಯಿಲ್ ಕಂಡಕರೆಗೆ ಪ್ರಶಸ್ತಿ

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರತಿಷ್ಠಿತ ದತ್ತನಿಧಿ ಪ್ರಶಸ್ತಿಯನ್ನು ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಸ್ವೀಕರಿಸಿದರು.

ಕಾಸರಗೋಡಿನ ಸೀತಾಂಗೊಳಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತ ಸಂಘ ಅಧ್ಯಕ್ಷ ಸುಬ್ಬಯ್ಯ ಕಟ್ಟೆ, ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳವರು ಶ್ರೀಮದ್ ಎಡನೀರು ಮಠ, ಕೆ. ಕೆ. ಶೆಟ್ಟಿ ಕುತ್ತಿಕಾರ್, ಡಾ. ಸದಾಶಿವ ಶೆಟ್ಟಿ ಕೂಳೂರು ಅವರ ಸಮ್ಮುಖದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡಕರೆ ಮೊಗರೊಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಹರ್ಷ ಮೇಲಾಂಟ ನೀಡುವ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0