ಐಪಿಎಲ್ ಸಂಭ್ರಮಾಚರಣೆ ದುರ್ಘಟನೆಗೆ ಸರ್ಕಾರವೇ ಹೊಣೆ: ಸಿಪಿಐಎಂ ಆರೋಪ

Jun 5, 2025 - 20:48
 0  23
ಐಪಿಎಲ್ ಸಂಭ್ರಮಾಚರಣೆ  ದುರ್ಘಟನೆಗೆ ಸರ್ಕಾರವೇ ಹೊಣೆ:  ಸಿಪಿಐಎಂ ಆರೋಪ

ಸಿದ್ದಾಪುರ :-ಆರ್‌ಸಿಬಿ ಕ್ರಿಕೆಟ್ ತಂಡದ ಗೆಲುವಿನ ಸಂಭ್ರಮಾಚರಣೆಯ ಹೊತ್ತಿನಲ್ಲಿ ಆಯೋಜಕರ ಅವೈಜ್ಞಾನಿಕ, ಅವ್ಯವಸ್ಥೆಯ ಆಯೋಜನೆಯಿಂದಾಗಿ ಕಾಲ್ತುಳಿತಕ್ಕೆ ಸಿಲುಕಿ 11 ಜೀವಬಲಿಯಾಗಿದೆ. ಇದೊಂದು ಅತ್ಯಂತ ದುರಂತದ ಘಟನೆಯಾಗಿದ್ದು ಇದರ ಹೊಣೆಗಾರಿಕೆಯನ್ನು ಕರ್ನಾಟಕ ಸರಕಾರ ಹೊರಬೇಕು. ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಕೊಡಗು ಜಿಲ್ಲಾ ಸಂಘಟನಾ ಸಮಿತಿ ಆರೋಪಿಸಿದೆ.

ಗುರುವಾರ ಪತ್ರಿಕೆ ಹೇಳಿಕೆ ನೀಡಿದ ಸಿಪಿಐಎಂ ಪಕ್ಷ ದ ಕೊಡಗು ಜಿಲ್ಲಾ ಕಾರ್ಯದರ್ಶಿ ರಮೇಶ ಎಚ್.ಬಿ  

ಐಪಿಎಲ್ ಒಂದು ಖಾಸಗಿ ಸಂಸ್ಥೆ ಆಯೋಜಿಸಿದ ಕ್ರೀಡಾಕೂಟವಾಗಿದ್ದು ಅದರ ಗೆಲುವು ನಲಿವುಗಳನ್ನು ಕ್ರೀಡಾ ಪ್ರೇಮಿಗಳು ಅವರಿಗೆ ಬೇಕಾದ ಹಾಗೆ ಸಂಭ್ರಮಿಸಿದ್ದಾರೆ. ಆದರೆ ಸರಕಾರವೊಂದು ಕ್ರೀಡೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿ ಹತ್ತಾರು ಜೀವ ಬಲಿಗೆ ಕಾರಣವಾಗಿರುವುದನ್ನು ಸಿಪಿಐಎಂ ಪಕ್ಷ ಖಂಡಿಸುತ್ತದೆ.

ಕ್ರಿಕೆಟ್ ಕ್ರೀಡೆಯನ್ನು ವ್ಯಾಪಾರೀಕರಣ ಮತ್ತು ಖಾಸಗೀಕರಣಕ್ಕೆ ಒಳಪಡಿಸಿದ ಪರಿಣಾಮವಾಗಿ ಉಂಟಾಗಿರುವ ಕ್ರಿಕೆಟ್ ಸರಕೀಕರಣದ ಲಾಭವನ್ನು ರಾಜಕೀಯವಾಗಿ ಪಡೆಯಲು ರಾಜ್ಯ ಸರ್ಕಾರ ಮುಂದಾಗಿ ಈ ಸಂಭ್ರಮಾಚರಣೆಯನ್ನು ಆಯೋಜಿಸಿದೆ ಎಂಬುದು ನಿಸ್ಸಂದೇಹವಾಗಿದೆ. ಐಪಿಎಲ್ ಸಂಪೂರ್ಣವಾಗಿ ಹಣಕಾಸಿನ ಮೇಲೆ ನಡೆಯುವ ಜೂಜಾಟವಾಗಿದೆ. ಇದರಿಂದ ರಾಜ್ಯದ ಮತ್ತು ದೇಶದ ಲಕ್ಷಾಂತರ ಯುವಕರು ಇದರಲ್ಲಿ ಸಿಲುಕಿ ತಮ್ಮ ಬದುಕನ್ನ ಕಳೆದುಕೊಳ್ಳುತ್ತಿದ್ದಾರೆ. ಐಪಿಎಲ್ ಪಂದ್ಯಾವಳಿಗಳು ಕ್ರಿಡಾಸ್ಪೂರ್ತಿಗೆ ಬದಲಾಗಿ ಯುವಜನಾಂಗವನ್ನ ದಾರಿ ತಪ್ಪಿಸುತ್ತಿವೆ.

ವಿಜಯೋತ್ಸವ ಮಾಡುವಾಗ ಸರಿಯಾದ ಪೂರ್ವ ಸಿದ್ಧತೆಗಳನ್ನು ಬಂದೋಬಸ್ತ್ ಮಾಡಿಕೊಳ್ಳದೇ ಅವಸರದಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ ಸರಕಾರದ ಕ್ರಮವನ್ನು ಖಂಡಿಸುತ್ತಲೇ, ಈ ದುರಂತದ ನಿಜವಾದ ಕಾರಣವನ್ನು ಸಮಗ್ರ ತನಿಖೆಯ ಮೂಲಕ ಬಹಿರಂಗ ಪಡಿಸಬೇಕೆಂದು ಒತ್ತಾಯಿಸುತ್ತೇವೆ.ಗಾಯಾಳುಗಳಾದ ಹಲವರಿಗೆ ಸೂಕ್ತ ಚಿಕಿತ್ಸೆಯನ್ನು ಸರಕಾರದ ಖರ್ಚು ವೆಚ್ಚದಲ್ಲಿ ನೀಡಬೇಕು. ನಿಧನರಾದ ಕುಟುಂಬಕ್ಕೆ ಸೂಕ್ತ ಪರಿಹಾರಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0