ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಯುವ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ತಲುಪಿಸುವಂತ ಕೆಲಸ ಯುವ ಕಾಂಗ್ರೆಸ್ ಪರಿಣಾಮಕಾರಿಯಾಗಿ ಮಾಡಬೇಕಿದೆ: ಶಾಸಕ ಎ.ಎಸ್ ಪೊನ್ನಣ್ಣ
ಮಡಿಕೇರಿ:
ಸುದರ್ಶನ್ ವೃತ್ತದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆಯೋಜನೆಗೊಂಡಿದ್ದ ಯುವ ಕಾಂಗ್ರೆಸ್ ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವವರು ಭಾಗವಹಿಸಿದರು.
ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್ ಮಂಜುನಾಥ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರತಿನಿಧಿಗಳು ಭಾಗವಹಿಸಿದ ಈ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಯುವಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಇಂದಿನಿಂದಲೂ ಯುವ ಕಾಂಗ್ರೆಸ್ ಕೊಡುಗೆ ಬಹು ದೊಡ್ಡದಾಗಿದೆ. ಯುವಕರಿಗೆ ರಾಜಕೀಯ ಅನುಭವ ಹಾಗೂ ಸಂಘಟನೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ನಿಟ್ಟಿನಲ್ಲಿ ಬಲಾಢ್ಯರಾಗಲು ಯುವ ಕಾಂಗ್ರೆಸ್ ಒಂದು ಮಹತ್ವದ ಘಟಕವಾಗಿದೆ. ಇಂದಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದರ ಸದುಪಯೋಗವನ್ನು ಪಡೆಸಿಕೊಂಡು ತಮ್ಮ ರಾಜಕೀಯ ಭವಿಷ್ಯ ರೂಪಿಸುವುದರೊಂದಿಗೆ ಜನರ ಸೇವೆ ಮಾಡುವುದರಲ್ಲಿ ನಿರತರಾಗಬೇಕೆಂದು ಕರೆ ನೀಡಿದರು.
ರಾಜಕೀಯದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಎದುರಾಗುತ್ತದೆ. ಅದರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಅವರಿಗೆ ಸವಾಲುಗಳನ್ನು ಎದುರಿಸಲು ಇಂತಹ ಸನ್ನಿವೇಶ ಉಪಯೋಗವಾಗಲಿದೆ. ಯುವಕರಲ್ಲಿರುವ ಆ ಶಕ್ತಿಯನ್ನು ಸಮಾಜದ ಒಳಿತಿಗೆ ಸದುಪಯೋಗಪಡಿಸುವುದರೊಂದಿಗೆ ಎಲ್ಲರು ತಮ್ಮ ರಾಜಕೀಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಮಡಿಕೇರಿ ಶಾಸಕರಾದ ಡಾ|| ಮಂತರ್ ಗೌಡ, ಹಿಮಾಚಲ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಮಾಧ್ಯಮ ಅಧ್ಯಕ್ಷ ದೀಪಕ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ , ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಕೊಡಗು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕೀಂ ಸುಂಟಿಕೊಪ್ಪ ಹರ್ಷದ್ , ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ ಹಂಸ , ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಕೊಡಗು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹನೀಫ್, ಕೊಡಗು ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
What's Your Reaction?






