ಕಾಂಗ್ರೆಸ್ ಸರ್ಕಾರ ಒಂದು ಧರ್ಮಕ್ಕೆ ಆದ್ಯತೆ ನೀಡುತ್ತಿದೆ: ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಆಕ್ರೋಶ

Jun 21, 2025 - 17:40
 0  35
ಕಾಂಗ್ರೆಸ್ ಸರ್ಕಾರ ಒಂದು ಧರ್ಮಕ್ಕೆ ಆದ್ಯತೆ ನೀಡುತ್ತಿದೆ: ಬಿಜೆಪಿ ಜಿಲ್ಲಾಧ್ಯಕ್ಷ  ನಾಪಂಡ ರವಿಕಾಳಪ್ಪ ಆಕ್ರೋಶ

ಮಡಿಕೇರಿ:ಕೇಂದ್ರ ಸರ್ಕಾರ ಎಲ್ಲರಿಗೂ ಸಮಾನವಾಗಿ ತಾರತಮ್ಯ ಮಾಡದೇ ಸಮಾನವಾಗಿ ಹಂಚುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರ ಒಂದು ಧರ್ಮಕ್ಕಾಗಿ ಆದ್ಯತೆ ನೀಡುತ್ತಿದೆ. ಇತ್ತೀಚೆಗೆ ಗುತ್ತಿಗೆ ವಿಚಾರದಲ್ಲಿ ಹೆಚ್ಚಿನ ಆದ್ಯತೆ ಮುಸ್ಲಿಂ ಜನಾಂಗಕ್ಕೆ ನೀಡಿದೆ. ಮೀಸಲಾತಿ ಕೂಡ ಶೇ.10ಇದ್ದದನ್ನು 15ರಷ್ಟು ಏರಿಸಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತರೇ ಹೆಚ್ಚಾಗಿದ್ದಾರೆ. ಹಿಂದೂಳಿದವರಿಗೆ ಯಾವುದೇ ಮೀಸಲಾತಿ ಸಿಗುತ್ತಿಲ್ಲ ಎಂದು ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ದೂರಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಚಾರ ಆರೋಪ ಕೇಳಿಬರುತ್ತಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಸವಾಲೆಸೆದರು.ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರಿಗೆ ದೂರವಾಣಿ ಕರೆ ಮಾಡಿ, ಹಣ ನೀಡಿದವರಿಗೆ ಮಾತ್ರ ವಸತಿ ನೀಡಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಪ್ರದರ್ಶನವಾಗುತ್ತಿದೆ. ಇದೊಂದು ಬಂಡ ಸರ್ಕಾರವಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಿದರೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ರಾಜ್ಯದಲ್ಲಿ ಮೂಡ ಹಗರಣ, ವಾಲ್ಮಿಕಿ ಹಗರಣ ಸೇರಿದಂತೆ ಇತರ ಆರೋಪಗಳು ಸಾಭಿತಾದರೂ ಕೂಡ ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತಾ ಸಾಗುತ್ತಿದೆ. ಇದು ನಮ್ಮ ದುರಾದೃಷ್ಟಕರ ಎಂದ ಅವರು, ರಾಜ್ಯದಲ್ಲಿ ಕಮಿಷನ್ ಮಿತಿ ಮೀರಿದೆ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಶಾಸಕ ಬಿ.ಆರ್.ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ ಎಂದರು.

ಬೆಂಗಳೂರಿನ ಕೊಡವ ಸಮಾಜಕ್ಕೆ ೭ ಎಕರೆ ಜಾಗ ನೀಡದ ಕುರಿತು ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಜಾಗ ನಿರ್ಧಾರ ಮಾಡಿತ್ತು. ಇವರೆ ವಿರೋಧಿಸುತ್ತಿದ್ದರು. ಆದರೆ, ಇಂದು ಏಕಪಕ್ಷೀಯವಾಗಿ ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದೆ. ಜನರಿಗೆ ಸತ್ಯಾಂಶವನ್ನು ಹೇಳುವಂತಾಗಬೇಕು ಎಂದರು.

ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲರೂ ಸಮಾನರು ಎಂದು ವಿವಿಧ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಧರ್ಮಾದಾರಿತ ರಾಜಕಾರಣ ಮಾಡುತ್ತಿದ್ದು, ಇದೊಂದು ಬಂಡ ಸರ್ಕಾರವಾಗಿದೆ. ಸ್ಪೀಕರ್ ತಂದೆ ಸ್ಥಾನದಲ್ಲಿರುವವರು. ಆದರೆ, ಮಂಗಳೂರಿನಲ್ಲಿ ಕೊಲೆಯಾದ ವ್ಯಕ್ತಿಯನ್ನು ಯು.ಟಿ.ಖಾದರ್ ಅವರು ಹೊಗಳುವ ಕೆಲಸ ಮಾಡುತ್ತಾರೆ. ಇದು ಸರಿಯಲ್ಲ. ಎಲ್ಲರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಅಂಬೇಡ್ಕರ್ ಸಂವಿಧಾನದಂತೆ ಕೆಲಸ ಮಾಡಬೇಕು ಎಂದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ಪ್ರಮುಖರಾದ ಅಜಿಲ್ ಕೃಷ್ಣ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0