ಕುಶಾಲನಗರ: ಏಳು ವರ್ಷಗಳ ಕನಸು, ಡಾ.ಮಂತರ್ ಗೌಡರವರಿಂದ ನನಸು: ಇಂದು ಉದ್ಘಾಟನೆಗೊಳ್ಳಲಿದೆ ನೂತನ ಪುರಸಭೆ ಕಟ್ಟಡ
(ಕೆ.ಬಿ ಶಂಶುದ್ದೀನ್)
ಕುಶಾಲನಗರ: ಕುಶಾಲನಗರ ಜನತೆಯ 07 ವರ್ಷಗಳ ಕನಸನ್ನು ಡಾ.ಮಂತ್ ಗೌಡರವರು ನನಸು ಮಾಡಿದ್ದಾರೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಕುಶಾಲನಗರ ಪುರಸಭೆ ಕಟ್ಟಡದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರು ಇಂದು ನೆರವೇರಿಸಲಿದ್ದಾರೆ. ಐತಿಹಾಸಿಕ ಹಿನ್ನಲೆಯನ್ನು ಹೊಂದಿರುವ ಕುಶಾಲನಗರ ಪುರಸಭೆಯ ವಾಣಿಜ್ಯ ಸಂಕೀರ್ಣದ ಉದ್ಘಾಟನೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಪುರಭವನಕ್ಕೆ ಮುನ್ನಡಿ ಬರೆಯಲು ಆಡಳಿತ ಮಂಡಳಿ ಸಜ್ಜಾಗಿದೆ. ನಗರದ ಹೃದಯ ಭಾಗದಲ್ಲಿರುವ ಪುರಭವನವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕಟ್ಟಡದ ಉದ್ಘಾಟನಾ ಕಾಲ ಕೂಡಿ ಬಂದಿರುವುದು ಕುಶಾಲನಗರ ಜನತೆಯ ಸಂತೋಷಕ್ಕೆ ಕಾರಣವಾಗಿದೆ. ಈ ಹಿಂದೆ ಕುಶಾಲನಗರ ಪುರಸಭೆಯಾಗಿದ್ದಾಗ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಅವರು ಪುರಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಸ್ಮರಣೀಯ.
ಹಳೆಯ ಕಟ್ಟಡವನ್ನು ೨೦೧೮ ಕೆಡವಿ ೨೦೩೦ರಲ್ಲಿ ಕಟ್ಟಡವನದನ್ನು ಉದ್ಘಾಟಿಸಬೇಕಾಗಿತ್ತು. ಅನುದಾನ ಹಾಗೂ ತಾಂತ್ರಿಕ ಕಾರಣಗಳಿಂದ ವಾಣಿಜ್ಯ ಸಂಕೀರ್ಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿತ್ತು. ಕೆಲವರ ನಿರಾಸಕ್ತಿಯಿಂದಾಗಿ ಕಾಮಗಾರಿ ಪೂರ್ಣಗೊಳ್ಳದೇ ನೆನೆಗುದಿಗೆ ಬಿದ್ದಿತ್ತು. ಶಾಸಕ ಡಾ.ಮಂತರ್ ಗೌಡರವರ ಪ್ರಯತ್ನದಿಂದ ಹೆಚ್ಚುವರಿ ಎರಡು ಕೋಟಿ ಅನುದಾನವನ್ನು ಬಳಸಿ ಕಟ್ಟಡವನ್ನು ಕಾಮಗಾರಿಯನ್ನು ಪರಿಪೂರ್ಣಗೊಳಿಸಲಾಗಿದೆ.
೭ ಕೋಟಿ ರೂ ಅನುದಾನ ಬಳಕೆ:
ಕಾಮಗಾರಿ ಪ್ರಾರಂಭವಾದಾಗಿನಿಂದ ಈವರೆಗೆ ೭ ಕೋಟಿಗೂ ಅಧಿಕ ಕಾಮಗಾರಿಯನ್ನು ಬಳಸಲಾಗಿದ್ದು, ೧.೧೦ ಏಕರೆ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡಂತೆ ಸುಸಜ್ಜಿತವಾಗಿ ಕಟ್ಟಡವನ್ನು ನಿರ್ಮಿಸಲಾಗಿದೆ. ಅತ್ಯಾಧುನಿಕ ಸಭಾಂಗಣ, ೧೫೦ ವಾಹನಗಳಿಗೆ ಬೇಕಾದ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ಬೇಕಾದ ಕೊಠಡಿಗಳನ್ನು ಒಳಗೊಂಡಿದೆ.
ಅನುದಾನ ಪೋಲು, ಆರೋಪ:
ಕುಶಾಲನಗರ ಪುರಸಭೆಯ ಕಟ್ಟಡ ತಳ ಅಂತಸ್ತಿನಲ್ಲಿ ಎಲೆಕ್ಟ್ರಿಕ್ ಪೈಪ್ ಲೈನ್ ಮಾಡದೇ ಇದೀಗ ಪರದಾಡುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದು ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ತಪ್ಪುಗಳು ಸಂಭವಿಸಿದ್ದು, ಈ ರೀತಿಯ ತಪ್ಪುಗಳು ಬಹಳಷ್ಟಿವೆ. ಸಾರ್ವಜನಿಕರ ಹಣವನ್ನು ಪೋಲು ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕುಶಾಲನಗರ ಪುರಸಭೆ ಕಟ್ಟಡ ಅನುದಾನದ ಕೊರತೆಯಿಂದ ಅಪೂರ್ಣಗೊಂಡಿತ್ತು. ಕುಶಾಲನಗರ ಜನತೆಯ ಕನಸನ್ನು ನನಸು ಮಾಡುವ ದೃಷ್ಟಿಯಿಂದ ಹೆಚ್ಚುವರಿ ಅನುದಾನವನ್ನು ಒದಗಿಸಿಕೊಡಲಾಗಿದೆ. ನೂತನ ಕಟ್ಟಡವು ಸಾರ್ವಜನಿಕರ ಸೇವೆಗೆ ಸಿದ್ಧವಾಗಿದೆ.
ಡಾ.ಮಂತರ್ ಗೌಡ, ಸ್ಥಳೀಯ ಶಾಸಕರು.
ಕುಶಾಲನಗರ ಪುರಸಭೆಯ ಕಟ್ಟಡ ಉದ್ಘಾಟನೆಯಾಗುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಇದಕ್ಕೆ ಶಾಸಕರ ಪ್ರಯತ್ನ ಬಹಳಷ್ಟಿದೆ. ಹಾಗೆಯೇ ಆಡಳಿತ ಮಂಡಳಿ, ಅಧಿಕಾರಿ ವರ್ಗದವರ ಶ್ರಮವೂ ಇದೆ. ಬುಧವಾರ ಉಸ್ತುವಾರಿ ಸಚಿವರು ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
- ಜಯಲಕ್ಷ್ಮಿ ಚಂದ್ರು, ಕುಶಾಲನಗರ ಪುರಸಭೆ ಅಧ್ಯಕ್ಷರು.
ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಕುಶಾಲನಗರ ವಾಣಿಜ್ಯ ಸಂಕೀರ್ಣದ ಕಾಮಗಾರಿ ಪೂರ್ಣಗೊಂಡಿದೆ. ಸಾರ್ವಜನಿಕರಿಗೆ ಪುರಸಭೆ ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಒಳಗೊಂಡಿದೆ. ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುರಸಭೆಯು ಸ್ವಂತ ಕಟ್ಟಡದಲ್ಲಿ ಸಾರ್ವಜನಿಕರ ಸೇವೆ ಸಲ್ಲಿಸಲು ಸಿದ್ಧವಾಗಿದೆ.
- ಗಿರೀಶ್, ಪುರಸಭೆ ಮುಖ್ಯಾಧಿಕಾರಿ.
ಐತಿಹಾಸಿಕ ಹಿನ್ನಲೆಯಿರುವ ಕುಶಾಲನಗರವು ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ನೀಡಿದ ಕೀರ್ತಿಯಿದೆ. ಇಂದು ಕುಶಾಲನಗರದಲ್ಲಿ ಪುರಭವನ ಉದ್ಘಾಟನೆಗೆ ಸಜ್ಜಾಗಿದೆ. ಇದಕ್ಕೆ ಶಾಸಕರ ಆಸಕ್ತಿ ಮತ್ತು ಪ್ರಯತ್ನದಿಂದ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಪುರಸಭೆಗೆ ಆದಾಯ ಬರುವ ದೃಷ್ಟಿಯಿಂದ ಮುಂದುವರಿದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ನಗರಸಭೆಯ ದೂರದೃಷ್ಟಿಯೊಂದಿಗೆ ಕಟ್ಟಡವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು.
- ವಿ.ಪಿ.ಶಶಿಧರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ.
What's Your Reaction?






