ಕುಶಾಲನಗರ: ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ:ಮುಳ್ಳುಸೋಗೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಇಂದು ಮಂಗಳವಾರ ಶಾಸಕರಾದ ಡಾ.ಮಂತರ್ ಗೌಡ ರವರು ಜನಸಂಪರ್ಕ ನಡೆಸಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಡೆಸಿದರು. ಕ್ಷೇತ್ರದ ಜನತೆಯ ಅಹವಾಲುಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಸಂಪರ್ಕ ಸಾಧಿಸಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಪರಿಹಾರ ಒದಗಿಸಲು ಸೂಚನೆ ನೀಡಿದರು.
What's Your Reaction?






