ಕುಶಾಲನಗರ:ಯುವ ಕಾಂಗ್ರೆಸ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಕುಶಾಲನಗರ: ವಿಶ್ವ ಪರಿಸರ ದಿನದ ಅಂಗವಾಗಿ ಕುಶಾಲನಗರ ಪಟ್ಟದ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್ 1ರಲ್ಲಿ ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗಿಡಗಳನ್ನು ನೆಟ್ಟು ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚಿರಂಜೀವಿ ಹೆಚ್.ಕೆ , ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಎ. ಆರ್ ಅರ್ಜುನ್ ,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಆದಂ ಎಸ್ ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ಅಪ್ಪಣ್ಣ, ರವಿ ,ರಂಜಿತ್, ರಾಘವೇಂದ್ರ, ನಿತೀಶ್ ,ನಿತಿ ಗುರುರಾಜ್ , ಪ್ರತಾಪ್ ,ಪ್ರತಾಪ್ ಕೆ.ಜಿ.ಎಫ್,ಯಶವಂತ್, ಗುರುರಾಜ್ ಹಾಗು ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
What's Your Reaction?






