ಕೊಡಗು ಬಲಿಜ ಸಮಾಜದಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ:ವಿದ್ಯಾರ್ಥಿ ವೇತನವು ಸಮಾಜದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಕಾರಿಯಾಗಲಿ: ಎ.ಎಸ್ ಪೊನ್ನಣ್ಣ
ಪೊನ್ನಂಪೇಟೆ:ಇಲ್ಲಿನ ಸಾಯಿ ಶಂಕರ್ ವಿದ್ಯಾಸಂಸ್ಥೆ ಬಳಿ ಇರುವ ಕೇವ್ ಇನ್ ಹಾಲ್ ಸಭಾಂಗಣದಲ್ಲಿ, ಕೊಡಗು ಬಲಿಜ ಸಮಾಜ ವತಿಯಿಂದ ಆಯೋಜಿಸಿದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭಾಗವಹಿಸಿದರು.
ಬಲಿಜ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಶಾಸಕರು, ಬಲಿಜ ಸಮಾಜದ ಪ್ರಮುಖರು ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ವಿದ್ಯಾರ್ಥಿ ವೇತನವು ಬಲಿಜ ಸಮಾಜದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಕಾರಿಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿದ ಎಲ್ಲಾ ಗಣ್ಯರು ಹಾಗೂ ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು
.