ಕ್ಷೇತ್ರದ ಜನರ ಸಮಸ್ಯೆಗೆ ಡಾ ಮಂತರ್ ಗೌಡ ತುರ್ತು ಸ್ಪಂದನೆ: ಪಶ್ಚಿಮ ಘಟ್ಟ ಮೂಲನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ

Jun 23, 2025 - 14:27
 0  132
ಕ್ಷೇತ್ರದ ಜನರ ಸಮಸ್ಯೆಗೆ ಡಾ ಮಂತರ್ ಗೌಡ ತುರ್ತು ಸ್ಪಂದನೆ:  ಪಶ್ಚಿಮ ಘಟ್ಟ ಮೂಲನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ

ಮಡಿಕೇರಿ:ತನ್ನ ಕ್ಷೇತ್ರದ ಜನರ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಡಾ ಮಂತರ್ ಗೌಡ ರವರ ಕಾರ್ಯಕ್ಷಮತೆಗೆ ಪಶ್ಚಿಮ ಘಟ್ಟ ಮೂಲ ನಿವಾಸಿಗಳ ಸಂಘದ ಪ್ರಧಾನ ಸಂಚಾಲಕ ಕಾಳಚಂಡ ರವಿ ತಮ್ಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎರಡು ದಿನದ ಹಿಂದೆ ಮಡಿಕೇರಿಯಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ ಮಡಿಕೇರಿ ಕ್ಷೇತ್ರದ ಯುವ ಉತ್ಸಾಹಿ ಶಾಸಕರಾದ ಡಾ ಮಂತರ್ ಗೌಡ ರವರನ್ನು ಭೇಟಿ ಮಾಡಿದ ಸಾಮಾಜಿಕ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರವಿ ತಮ್ಮಯ್ಯ ನವರು ಭೇಟಿ ಮಾಡಿ ತಮ್ಮ ಗ್ರಾಮದ ಮೂಲಭೂತ ಸೌಕರ್ಯ ಕೊರತೆಯನ್ನು ನಿವಾರಿಸುವಂತೆ ವಿನಂತಿಸಿಕೊಂಡಿದ್ದರು.

ಅದಕ್ಕೆ ತಕ್ಷಣವೇ ಸ್ಪಂದಿಸಿದ ಡಾ ಮಂತರ್ ಗೌಡ ರವರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸಿ ಸೂಕ್ತ ಕಾರ್ಯಕ್ರಮ ರೂಪಿಸುವಂತೆ ಇಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅಭಿಯಂತರಾದ ರಘು ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಹಾಗೂ ಇತರ ಸಿಬ್ಬಂದಿಗಳೊಂದಿಗೆ ತೆರಳಿ ರವಿ ತಮ್ಮಯ್ಯ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಎರಡು ದಿನದಲ್ಲಿ ಅಂದಾಜು ಪಟ್ಟಿ ತಯಾರಿಸಿ ಶಾಸಕರ ಅನುಮೋದನೆ ಪಡೆಯಲಾಗುವುದು ಎಂದು ಇಂಜಿನಿಯರ್ ವಿಭಾಗ ಮಾಹಿತಿ ನೀಡಿದ್ದಾರೆ.ಶಾಸಕರ ತಕ್ಷಣದ ಸ್ಪಂದನೆಗೆ ರವಿ ತಮ್ಮಯ್ಯ ನವರು ಧನ್ಯವಾದ ಹೇಳಿದರಲ್ಲದೆ ಡಾ ಮಂತರ್ ಗೌಡರವರು ವಿಭಿನ್ನ ಚಿಂತನೆಯುಳ್ಳ ಜನಾನುರಾಗಿ ಶಾಸಕರಾಗಿ ಗುರುತಿಸಿಕೊಳ್ಳುವ ಮೂಲಕ ಮುಂದಿನ ಪೀಳಗೆಯ ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0