ಜುಲೈ 06 ರಂದು ಚುಟುಕು ಕಾವ್ಯಶ್ರೀ ಪ್ರಶಸ್ತಿ ಪ್ರದಾನ

ಮಡಿಕೇರಿ:"ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ" ಪ್ರದಾನ ಮತ್ತು ಕವಿಗೋಷ್ಠಿ ಜುಲೈ 6ರಂದು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ಕನ್ನಡ ಭವನ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಮತ್ತು ಕೊಡಗು ಕಾವ್ಯ ಕವಿಗೋಷ್ಠಿ ಕಾರ್ಯಕ್ರಮ ಮಡಿಕೇರಿಯ ಪತ್ರಿಕಾ ಭವನದಲ್ಲಿ ಜುಲೈ 6.7.2025 ರಂದು ನಡೆಯಲಿದೆ.
ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆಯ ಕವಿಗಳಿಗೆ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದ 5 ಮಂದಿಗೆ "ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ 2025 ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಪುಸ್ತಕ ನೀಡಿ ಪುರಸ್ಕರಿಸಲಾಗುವುದು.
ಇದೇ ವೇಳೆ "ಕೊಡಗು ಮಳೆಗಾಲ ಕವಿಗೋಷ್ಠಿ" ಗೆ ಹೆಸರು ನೋಂದಾಯಿಸಲು ಕನ್ನಡ ಚುಟುಕು ಸಾಹಿತ್ಯ ಪರಿಷತ್, ಹಾಗೂ ಕೊಡಗು ಕನ್ನಡ ಭವನ ಅಪೇಕ್ಷಿಸಿದೆ. ಕವಿಗೋಷ್ಠಿಯಲ್ಲಿ ಹೆಸರು ನೋಂದಾಯಿಸುವವರು ಕಾರ್ಯದರ್ಶಿ ಶ್ರೀಮತಿ ಬೊಟ್ಟೋಳಂಡ ನಿವ್ಯ ಕಾವೇರಮ್ಮ 9449505092 ಈ ವಾಟ್ಸಪ್ ನಲ್ಲಿ ಹೆಸರು ನೋಂದಾಯಿಸಲು ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಕೊಡಗು ಕನ್ನಡ ಭವನ ಸಂಯುಕ್ತ ಆಶ್ರಯದಲ್ಲಿ ಕೊಡಗು ಕನ್ನಡ ಭವನ ಅಧ್ಯಕ್ಷ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಎಂ ಎ. ರುಬೀನಾ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
What's Your Reaction?






