ಟಿ.ಶೆಟ್ಟಿಗೇರಿ:22 ಲಕ್ಷ ರೂ ಅನುದಾನ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ರಸ್ತೆ ಅಭಿವೃದ್ಧಿಗೆ ಪ್ರಮುಖ ‌ಆದ್ಯತೆ: ಎ.ಎಸ್ ಪೊನ್ನಣ್ಣ

May 10, 2025 - 19:12
 0  36
ಟಿ.ಶೆಟ್ಟಿಗೇರಿ:22 ಲಕ್ಷ ರೂ ಅನುದಾನ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ  ರಸ್ತೆ ಅಭಿವೃದ್ಧಿಗೆ ಪ್ರಮುಖ ‌ಆದ್ಯತೆ: ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ಸುಮಾರು ₹ 22 ಲಕ್ಷಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಲಾಯಿತು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಉದ್ಘಾಟನೆ ನೆರವೇರಿಸುತ್ತಾ ಮಾತನಾಡಿ, ತಾನು ಆಯ್ಕೆಯಾಗಿ ಬಂದಲ್ಲಿನಿಂದ ಕ್ಷೇತ್ರದಾದ್ಯಂತ ರಸ್ತೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆಯನ್ನು ನೀಡುತ್ತಿದ್ದು, ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು ಹಾಗೂ ವಿಶೇಷವಾಗಿ ಸಾರ್ವಜನಿಕರು ಇಂತಹ ಅಭಿವೃದ್ಧಿ ಕಾಮಗಾರಿಗಳಿಗೆ ತನ್ನೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಜನರ ಭೇಡಿಕೆಗಳಿಗೆ ಸ್ಪಂದಿಸುತ್ತಾ ಆದ್ಯತೆ ಮೇರೆಗೆ ತಾನು ಎಲ್ಲಾ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು ಪುನರುಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ,ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಪ್ರಭು ಸುಬ್ಬಯ್ಯ,ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರು, ಹಾಗೂ ಇತರ ಪ್ರಮುಖರು ಉಪಸಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0