ಡಿ ಕೆ ಶಿವಕುಮಾರ್ ರವರಿಗೆ ವಿಡಿಯೋ ಕರೆ ಮೂಲಕ ಹಾರಂಗಿ ಜಲಾಶಯದ ನೀರಿನ ಮಟ್ಟ ಹಾಗೂ ಸೇತುವೆ ನಿರ್ಮಾಣ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಮನವಿ ಮಾಡಿದ ಶಾಸಕ ಡಾ.ಮಂತರ್ ಗೌಡ

Jun 17, 2025 - 21:16
 0  166
ಡಿ ಕೆ ಶಿವಕುಮಾರ್ ರವರಿಗೆ ವಿಡಿಯೋ ಕರೆ ಮೂಲಕ ಹಾರಂಗಿ ಜಲಾಶಯದ ನೀರಿನ ಮಟ್ಟ ಹಾಗೂ ಸೇತುವೆ ನಿರ್ಮಾಣ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಮನವಿ ಮಾಡಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ:ಹಾರಂಗಿ ಜಲಾಶಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಹೆಚ್ಚಿನ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಇಂದು ಮಂಗಳವಾರ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಿರು ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಕಡಿತವಾಗುವ ಹಿನ್ನೆಲೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರವೇ ಸೇತುವೆ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಸ್ಥಳದಲ್ಲಿಯೇ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ್ ರವರಿಗೆ ನೇರವಾಗಿ ವಿಡಿಯೋ ಕಾಲ್ ಮಾಡುವ ಮೂಲಕ ಪರಿಸ್ಥಿತಿಯ ಬಗ್ಗೆ ತಿಳಿಸಿದರು. ಹಾಗೆಯೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರಿಗೂ ವಿಡಿಯೋ ಕಾಲ್ ಕರೆ ಮಾಡುವ ಮೂಲಕ ಪರಿಸ್ಥಿತಿಯ ಬಗ್ಗೆ ಶಾಸಕ ಡಾ.ಮಂತರ್ ಗೌಡ ಮಾಹಿತಿ ನೀಡಿದರು.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0