ನೀಟ್ ಪರೀಕ್ಷೆ: ರಾಜ್ಯಕ್ಕೆ ಏಳನೇ ಸ್ಥಾನ ಪಡೆದ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ.ಜಿ ನಿಧಿರವರನ್ನು ಸನ್ಮಾನಿಸಿ ಗೌರವಿಸಿದ ಶಾಸಕ ಡಾ ಮಂತರ್ ಗೌಡ

ಮಡಿಕೇರಿ:ರಾಷ್ಟ್ರೀಯ ಅರ್ಹತಾ ಮತ್ತು ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 84 ನೇ ರ್ಯಾಂಕ್ ಹಾಗೂ ಕರ್ನಾಟಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ. ಜಿ ನಿಧಿ ರವರನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ನಿಧಿ ಪೋಷಕರಾದ ಕೆ ಎಚ್ ಗಣಪತಿ, ಗುಣವತಿ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಎಸ್ ಐ ಚೇತನ್, ಸೋಮವಾರಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ ಯು ಉಪಸ್ಥಿತರಿದ್ದರು.
What's Your Reaction?






