ಪೊನ್ನಂಪೇಟೆ: ಮೂರು ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ತಾಲೂಕಿನ ಬಾಳೆಲೆ ಗ್ರಾಮದ, ಗಂಧದಗುಡಿ ಪೈಸಾರಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ 30 ಲಕ್ಷದ ಮೂರು ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಇಂದು ಶಾಸಕರು ನೆರವೇರಿಸಿದರು. ಗಂಧದಗುಡಿ ಪೈಸಾರಿಯ ಹಲವು ರಸ್ತೆಗಳು ದಶಕಗಳಿಂದ ಅಭಿವೃದ್ಧಿ ಕಾಣದೆ ಇದ್ದು, ಶಾಸಕರಾಗಿ ಆಯ್ಕೆಯಾದ ಮೇಲೆ ಎ.ಎಸ್ ಪೊನ್ನಣ್ಣ ರವರು ಈ ಭಾಗದ ಜನಜೀವನದ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇಂದು ಪೈಸಾರಿಯ ಜನರ ಅನುಕೂಲತೆಂದು ಈ ಭಾಗದ ರಸ್ತೆಗಳನ್ನು ಲೋಕಾರ್ಪಣೆ ಮಾಡಿ ಎಲ್ಲರಿಗೂ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್,ಬಾಳಲೆ ವಲಯ ಅಧ್ಯಕ್ಷರಾದ ಕೋದಂಡ ಸೋಮಣ್ಣ,ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ಬಾಳಲೆ ಪಂಚಾಯತ್ ಸದಸ್ಯರಾದ ವಿನು ಉತ್ತಪ್ಪ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
What's Your Reaction?






