ಪೊನ್ನಂಪೇಟೆ:ಹಳ್ಳಿಗಟ್ಟು ಗ್ರಾಮದಲ್ಲಿ ವಿದ್ಯುತ್ ಬಲವರ್ಧನೆ ಕಾಮಗಾರಿಗೆ ಚುರುಕು: ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕ ಎ.ಎಸ್ ಪೊನ್ನಣ್ಣ

Jun 19, 2025 - 19:53
Jun 19, 2025 - 19:53
 0  30
ಪೊನ್ನಂಪೇಟೆ:ಹಳ್ಳಿಗಟ್ಟು ಗ್ರಾಮದಲ್ಲಿ ವಿದ್ಯುತ್ ಬಲವರ್ಧನೆ ಕಾಮಗಾರಿಗೆ ಚುರುಕು:  ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ :ತಾಲೂಕಿನ ಅರ್ವತೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಟ್ಟು ಗ್ರಾಮದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಶಿಜಾ ಶಾಜಿ ಅವರು ತಮ್ಮ ಅಧಿಕಾರವಧಿಯಲ್ಲಿ 2019-20ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ಕೊಳವೆ ಬಾವಿಯೊಂದನ್ನು ಕೊರೆಸುವ ಮೂಲಕ ಕುಡಿಯುವ ನೀರನ್ನು ಒದಗಿಸಲು ಮುಂದಾಗಿದ್ದರು. ಆದರೆ ಈ ಭಾಗದಲ್ಲಿ ವಿದ್ಯುತ್ ವೋಲ್ಟೇಜ್ ಸಮಸ್ಯೆಯಿಂದಾಗಿ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಸಾಧ್ಯವಾಗದೇ, ಯೋಜನೆ ನೆನೆಗುದಿಗೆ ಬಿದ್ದಿತ್ತು. ನಂತರದ ದಿನಗಳಲ್ಲಿ ಜನಪ್ರತಿನಿಧಿಗಳಿಗೆ ಸಮಸ್ಯೆ ಕುರಿತು ಮನವರಿಕೆ ಮಾಡಿದ್ದರೂ ಪ್ರಯೋಜನ ಶೂನ್ಯವಾಗಿತ್ತು. ಈ ಬಗ್ಗೆ ವಿರಾಜಪೇಟೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಾಜಿ ಅಚ್ಚುತ್ತನ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮೂಕಳೆರ ಎಂ. ಎಸ್ ಕುಶಾಲಪ್ಪ, ಗಣೇಶ್, ಧನು ಅವರುಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಕೂಡಲೇ ಸ್ಪಂದಿಸಿದ ಶಾಸಕರು, ಈ ಭಾಗಕ್ಕೆ ಕುಡಿಯುವ ನೀರನ್ನು ಒದಗಿಸಲು ವಿದ್ಯುತ್ ಬಲವರ್ಧನೆಗೊಳಿಸಿ 10 ದಿನಗಳ ಒಳಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸುಮಾರು 30 ವಿದ್ಯುತ್ ಕಂಬಗಳನ್ನು ಅಳವಡಿಸಿ, ವಿದ್ಯುತ್ ಬಲವರ್ಧನೆ ಕಾಮಗಾರಿಯನ್ನು ಆರಂಭಿಸಿದ್ದಾರೆ. 

ಈ ಕುರಿತು ವಿರಾಜಪೇಟೆ ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಶಾಜಿ ಅಚ್ಚುತ್ತನ್ ಅವರು ಮಾತನಾಡಿ, ಕಾಮಗಾರಿ ಕುರಿತು ಮಾಹಿತಿ ನೀಡಿದರಲ್ಲದೇ, ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಧನ್ಯವಾದ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಜವಾಬ್ದಾರಿ ಸ್ಥಳೀಯ ಪಂಚಾಯಿತಿಯದಾಗಿರುತ್ತದೆ ಎಂದರು.

ಸ್ಥಳೀಯರಾದ ಬಿ. ಪಿ ಲತಾ ಅವರು ಮಾತನಾಡಿ, ಹಳ್ಳಿಗಟ್ಟು ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಶೀಜಾ ಶಾಜಿ ಅವರ ಅಧಿಕಾರದ ಅವಧಿಯಲ್ಲಿ ಕೊಳವೆ ಬಾವಿ ವ್ಯವಸ್ಥೆ ಕಲ್ಪಿಸಿದರು ವಿದ್ಯುತ್ ಬಲವರ್ಧನೆ ಇಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಶಾಸಕರಲ್ಲಿ ಮನವಿ ಮಾಡಿದ ಮೇರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದಾರೆಂದರು.ಈ ಸಂದರ್ಭ ಬಿ.ಎಸ್. ಗೋವಿಂದ, ಬಿ. ಸಿ ವೆಂಕಪ್ಪ, ಟಿ. ಎನ್ ಕುಟ್ಟಪ್ಪ, ಸೀನಪ್ಪ, ಬಿ ವಿ ಪ್ರಶಾಂತ್, ಲತಾ ಬಿ. ಪಿ, ವಾಣಿ, ಹರೀಶ್, ಪ್ರವೀಣ್, ಮೀನಾಕ್ಷಿ, ಸೀತಮ್ಮ ಮತ್ತಿತರರು ಇದ್ದರು.

ವರದಿ:-ಚೆಪ್ಪುಡಿರ ರೋಷನ್, ಪೊನ್ನಂಪೇಟೆ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0