ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕೆಲಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿ:ಮಂಜುನಾಥ್ ಗೌಡ

Jun 22, 2025 - 01:09
 0  3
ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕೆಲಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿ:ಮಂಜುನಾಥ್ ಗೌಡ

ಕುಶಾಲನಗ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಮಂಜುನಾಥ್ ಗೌಡ ಅವರನ್ನು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣ್ಣೀರ ನೇತೃತ್ವದಲ್ಲಿ ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿ ಜೆ.ಸಿ.ಬಿ ಯಲ್ಲಿ ಹೂ ಮಳೆ ಸುರಿಸಿ ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾತನಾಡಿದ ಯುವ ಕಾಂಗ್ರೆಸ್ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್, ಇದೇ ಮೊದಲ ಬಾರಿಗೆ ಕೊಡಗಿಗೆ ಆಗಮಿಸಲಾಗಿದ್ದು. ಸರ್ಕಾರ ಐದು ಗ್ಯಾರಂಟಿಗಳ ಕೊಟ್ಟಿದೆ. ದೇಶದ ಅಭಿವೃದ್ಧಿ, ಕೃಷಿ, ಜಿಡಿಪಿ ಬೆಳವಣಿಗೆಗೆ ಪಕ್ಷ ಅನೇಕ ಕೊಡುಗೆಗಳ ನೀಡಿದೆ. ಇದನ್ನು ಪಕ್ಷದ ಯುವಕರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಿಸಿ ಜನರ ಧ್ವನಿಯಾಗಬೇಕು’ ಎಂದರು.

ಬೂತ್ ಮಟ್ಟದ ಸಂಘಟನೆಯನ್ನು ಬಲಪಡಿಸುವ ಮಹತ್ವದ ಆಶಯವನ್ನು ವ್ಯಕ್ತಪಡಿಸಿದರು. ಯುವ ಶಕ್ತಿ ಎಂಬ ಸದುದ್ದೇಶದೊಂದಿಗೆ ಸಂಘಟನೆಯ ತಳಮಟ್ಟದ ಬಲವರ್ಧನೆಯ ಅಗತ್ಯತೆಯನ್ನು ಅವರು ಒತ್ತಿಹೇಳಿದರು. 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಸಿ ಕತ್ತಣ್ಣೀರ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಸುಧಾರಿಸಿದೆ. ಕಾಂಗ್ರೆಸ್ ನ ಜನಪರವಾದ ಕಾರ್ಯಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಮುಂಬರುವ ಸ್ಥಳಿಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದರು.

ಈ ಸಂದರ್ಭ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ,ಪ್ರಧಾನ ಕಾರ್ಯದರ್ಶಿ ಹರ್ಷದ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ, ಉಪಾಧ್ಯಕ್ಷರಾದ ಅರ್ಜುನ್, ಸಚಿನ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಂ.ಎಸ್. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪ್ರಮುಖರಾದ ನಯಾಜ್, ಅಪ್ಪಣ್ಣ,ರವಿ,ಚರಣ್,ಸಿದ್ದು,ಪ್ರತಾಪ್, ತೇಜು, ನಿತೀಸ್, ಸೋಮಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0