ಬೆಂಗಳೂರು: ಭಯೋತ್ಪಾದನಾ ವಿರೋಧಿ ದಿನಾಚರಣೆ:ಶಾಸಕ ಎ.ಎಸ್ ಪೊನ್ನಣ್ಣ ಭಾಗಿ

ಬೆಂಗಳೂರು: ಭಯೋತ್ಪಾದನಾ ವಿರೋಧಿ ದಿನ ಆಚರಣೆ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ "ಪ್ರತಿಜ್ಞಾ ವಚನ" ಬೋಧಿಸಿದರು
ಈ ಸಂದರ್ಭದಲ್ಲಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಅರಣ್ಯ ಸಚಿವ ಈಶ್ವರ ಖಂಡ್ರೆ, ನಗರಾಭಿವೃದ್ಧಿ ಸಚಿವ ಸುರೇಶ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಗೃಹ ಮಂಡಳಿಯ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಬಿ.ಬಿ.ಕಾವೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
What's Your Reaction?






