ಭಾಗಮಂಡಲ:ಬೆಂಗೂರು ಗ್ರಾಮದ ದೋಣಿ ಕಾಡುವಿನಲ್ಲಿ ಪ್ರವಾಹ: ದೋಣಿ ಮೂಲಕ ಸಂಚಾರ

ಭಾಗಮಂಡಲ:ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಸದರಿ ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
What's Your Reaction?






