ಮರ್ಕಝುಲ್ ಹಿದಾಯ ವತಿಯಿಂದ ನೂತನವಾಗಿ ಆಯ್ಕೆಯಾದ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ಪದಾಧಿಕಾರಿಗಳಿಗೆ ಸನ್ಮಾನ

Jun 17, 2025 - 13:42
 0  123
ಮರ್ಕಝುಲ್ ಹಿದಾಯ ವತಿಯಿಂದ ನೂತನವಾಗಿ ಆಯ್ಕೆಯಾದ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ಪದಾಧಿಕಾರಿಗಳಿಗೆ ಸನ್ಮಾನ

ಚೆಯ್ಯಂಡಾಣೆ:ಮರ್ಕಝುಲ್ ಹಿದಾಯ ಕೊಟ್ಟಮುಡಿ ವಿದ್ಯಾ ಸಂಸ್ಥೆಯ ವತಿಯಿಂದ ಕೊಡಗು ಜಿಲ್ಲಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ಸಂಘಟನೆಯ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮವು ಆಯೋಜಿಸಲಾಗಿತ್ತು.

ಮರ್ಕಝಲ್ ಹಿದಾಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮರ್ಕಝ್ ನ ಉಪಾಧ್ಯಕ್ಷರಾದ ಮೊಯ್ದು ಕುಟ್ಟಿ ಹಾಜಿ ಕೊಳಕೇರಿ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಮರ್ಕಝ್ ಪಬ್ಲಿಕ್ ಶಾಲೆಯ ಅಧ್ಯಕ್ಷರು ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮೊಹಮ್ಮದ್ ಹಾಜಿ ಕುಂಜಿಲ ಉದ್ಘಾಟಿಸಿ ಮಾತನಾಡಿದರು.

ಮರ್ಕಝಲ್ ಹಿದಾಯ ಸಂಸ್ಥೆಯ ವ್ಯವಸ್ಥಾಪಕರಾದ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಮರ್ಕಝ್ ಹಿದಾಯ ಕಾರ್ಯದರ್ಶಿ ಯೂಸುಫ್ ಹಾಜಿ ಕೊಂಡಂಗೇರಿ,ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಮುನೀರ್ ಮಲ್ಹರಿ, ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಕಮರುದ್ದೀನ್ ಅನ್ವಾರಿ ಸಖಾಫಿ,ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿ ಮಾತನಾಡಿದರು.

ನಂತರ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ನ ಕೊಡಗು ಜಿಲ್ಲಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಕ್ಯಾಬಿನೆಟ್ ಪದಾಧಿಕಾರಿಗಳಿಗೆ ಸಯ್ಯದ್ ಜಆಫರ್ ಸ್ವಾದಿಕ್ ತಂಙಳ್ ಕುಂಬೋಲ್ ರವರು ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮರ್ಕಝ್ ಸಂಸ್ಥೆಯ ಆಡಳಿತಾಧಿಕಾರಿ ಹಮೀದ್ ಕಬಡಕೇರಿ,ಅದ್ದು ಹಾಜಿ ನಾಪೋಕ್ಲು, ಹಾದಿಯಾ ಉಸ್ತುವಾರಿ ಅಬ್ದುಲ್ ಸಲಾಂ ಇರ್ಫಾನಿ,ಮಾರ್ಕಝ್ ದಆವಾ ಕಾಲೇಜು ಪ್ರಿನ್ಸಿಪಾಲ್ ಹುಸೈನ್ ನೂರಾನಿ, ಅಶ್ರಫ್ ಸಖಾಫಿ ಉಪಸ್ಥಿತರಿದ್ದರು.ಸಯ್ಯದ್ ಸ್ವಾದಿಕ್ ಜಅಫರ್ ತಂಙಳ್ ಪ್ರಾರ್ಥಿಸಿ,ಅಸ್ಕರ್ ಸಖಾಫಿ ಸ್ವಾಗತಿಸಿ,ಸರ್ವರನ್ನು ವಂದಿಸಿದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0