ಮೈಸೂರು: ಜನರಿಗೆ ಅನುಕೂಲವಾಗಲು ಅತಿ ಶೀಘ್ರವೇ ಪಾದಚಾರಿ ಸೇತುವೆ ನಿರ್ಮಾಣ: ಯದುವೀರ್ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್. ಮಿಲ್ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದರು
ಮೈಸೂರು: ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಮೈಸೂರಿನ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್. ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಯದುವೀರ್ ಒಡೆಯರ್ ಮಾತನಾಡಿದರು.ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಜನರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು ಎಂದರು.
ಕಾಮಗಾರಿ ಕೆಲಸ ತ್ವರಿತವಾಗಿ ಗತಿಯಲ್ಲಿ ಸಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದರು ತಿಳಿಸಿದರು.ಜನರಿಗೆ ಅನುಕೂಲವಾಗು ರೀತಿಯಲ್ಲಿ ಎಲ್ಲ ರೀತಿಯ ಕೆಲಸಗಳನ್ನು ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದರು.
