ಯುವ ಕಾಂಗ್ರೆಸ್ ಬುನಿಯಾದಿ ತರಬೇತಿ: ಅನೂಪ್ ಕುಮಾರ್ ಸುಂಟ್ಟಿಕೊಪ್ಪ ಭಾಗಿ
ಮಡಿಕೇರಿ:ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆದ ಯುವ ಕಾಂಗ್ರೆಸ್ ಬುನಿಯಾದಿ ತರಬೇತಿ ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ ಸುಂಟ್ಟಿಕೊಪ್ಪ ಭಾಗವಹಿಸಿದ್ದರು.ಮೂರು ದಿನಗಳ ಕಾಲ ನಡೆದ ತರಬೇತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯುವ ಕಾಂಗ್ರೆಸ್ ಮುಖಂಡರೊಂದಿಗೆ ಅನೂಪ್ ಕುಮಾರ್ ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಸಂಘಟಿಸುವ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದರು.
ಕೊಡಗು ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ ಕೂಡ ಭಾಗವಹಿಸಿದ್ದರು.
What's Your Reaction?






