ವಸತಿ ಮತ್ತು ಅಲ್ಪಸಂಖ್ಯಾತರ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಎ. ಎಸ್. ಪೊನ್ನಣ್ಣ ವಿಶೇಷ ಸಭೆ

ಮಡಿಕೇರಿ:ಬೆಂಗಳೂರಿನ ವಸಂತನಗರದ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ನೇತೃತ್ವದಲ್ಲಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತರ ಮುಖಂಡರೊಂದಿಗೆ ಸಭೆ ನಡೆಸಲಾಯಿತು.ವಿರಾಜಪೇಟೆ ಕ್ಷೇತ್ರದ ವ್ಯಾಪ್ತಿಯ ಮಸೀದಿ, ಖಬರ ಸ್ಥಾನ, ಶಾದಿ ಮಹಲ್, ಚರ್ಚ್ ಹಾಗೂ ಅಲ್ಪಸಂಖ್ಯಾತರ ಆರ್ಥಿಕ, ಶೈಕ್ಷಣಿಕ, ಮೂಲ ಸೌಲಭ್ಯಗಳ ಕಾಮಗಾರಿಗಳಿಗೆ ಕೂಡಲೇ ಕ್ರಮ ವಹಿಸಲುಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
What's Your Reaction?






