ವಿರಾಜಪೇಟೆ: ಬಸ್ಸ್ ತಂಗುದಾಣದಲ್ಲಿ ಸುಚಿತ್ವ ಕಾಪಾಡಿ, ಜನಸಾಮಾನ್ಯರಿಗೆ ಪೂರಕವಾದ ವಾತಾವರಣ ನಿರ್ಮಿಸಿ ಎ.ಎಸ್ ಪೊನ್ನಣ್ಣ : ವಿರಾಜಪೇಟೆ ನಿಸರ್ಗ ಲೇಔಟ್ ನಲ್ಲಿ ನೂತನ ಬಸ್ಸ್ ತಂಗುದಾಣ ಉದ್ಘಾಟನೆ

ವಿರಾಜಪೇಟೆ:ಇಲ್ಲಿನ ನಿಸರ್ಗ ಲೇಔಟ್ ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣದ ಉದ್ಘಾಟನೆಯನ್ನು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ನೆರವೇರಿಸಿದರು.
ಬಳಿಕ ಮಾತನಾಡಿದ ಮಾನ್ಯ ಶಾಸಕರು ಬಸ್ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಈ ತಂಗುದಾಣಗಳ ನಿರ್ಮಾಣ ಮಾಡಲಾಗಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಅದೇ ರೀತಿ ಸಂಬಂಧಪಟ್ಟವರು ಈ ತಂಗುದಾಣದಲ್ಲಿ ಸುಚಿತ್ವ ಕಾಪಾಡುವುದರೊಂದಿಗೆ ಜನಸಾಮಾನ್ಯರಿಗೆ ಇಲ್ಲಿ ಇರಲು ಪೂರಕವಾದ ವಾತಾವರಣ ನಿರ್ಮಿಸುವ ಬಗ್ಗೆ ಗಮನಹರಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪುರಸಭೆ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ,ಪುರಸಭೆ ಸದಸ್ಯರು, ಪಕ್ಷದ ಪ್ರಮುಖರು,ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
What's Your Reaction?






