ಸಹಾಯಕ ಕಮಾಂಡೆಂಟ್ ಕಿರಣ್ ಕುಮಾರ್ ಕೊಡಗು ಜಿಲ್ಲೆಯ ಭೂಕುಸಿತ ಪ್ರದೇಶಗಳಿಗೆ ಭೇಟಿ

ಮಡಿಕೇರಿ: ಕಿರಣ್ ಕುಮಾರ್ ಸಹಾಯಕ ಕಮಾಂಡೆಂಟ್, 10 NDRF, ಕೊಡಗು ಜಿಲ್ಲೆಗೆ ಭೇಟಿ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ನಿಯೋಜನೆಗೊಂಡಿರುವ NDRF ತಂಡದ ಸನ್ನದ್ಧತೆಯನ್ನು ಪರಿಶೀಲಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಶ್ರೀ. ಆರ್. ಎಂ. ಅನನ್ಯ ವಾಸುದೇವ ಅವರೊಡನೆ ಸಮಾಲೋಚನೆ ನಡೆಸಿ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.