ಸೋಮವಾರ: ಸೋಮವಾರಪೇಟೆಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಸೋಮವಾರ: ಸೋಮವಾರಪೇಟೆಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಸೋಮವಾರಪೇಟೆ:ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರ ವಿಶೇಷ ಕಾಳಜಿಯಿಂದ* ಹಸಿದವರ ಹೊಟ್ಟೆ ತುಂಬಿಸುವ* ಇಂದಿರಾ ಕ್ಯಾಂಟೀನ್ ಸೋಮವಾರಪೇಟೆಯಲ್ಲಿ ಪ್ರಪ್ರಥಮವಾಗಿ ಮೇ 19ರ ಸೋಮವಾರ ಬೆಳಗ್ಗೆ 11:30 ಗಂಟೆಗೆ ಸರಿಯಾಗಿ ಶಾಸಕರಾದ ಡಾ.ಮಂತರ್ ಗೌಡ ರವರು ಉದ್ಘಾಟನೆ ಮಾಡಲಿದ್ದಾರೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ ಸತೀಶ್ ತಿಳಿಸಿದ್ದಾರೆ.

 ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಸರ್ವ ಕಾರ್ಯಕರ್ತರು ಮತ್ತು ಮುಖಂಡರು ,ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಂಬಂಧಿಸಿದ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ಯುವ ಕಾಂಗ್ರೆಸ್,ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು/ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸರಕಾರಿ ನಾಮನಿರ್ದೇಷಿತ ಅಧ್ಯಕ್ಷರುಗಳು/ಸದಸ್ಯರುಗಳು, ಕಾಂಗ್ರೆಸ್ ಬೆಂಬಲಿತ ಪಂಚಾಯಿತಿಯ ಅಧ್ಯಕ್ಷರು/ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ತಪ್ಪದೇ ಹಾಜರಾಗಿ ಕಾರ್ಯಕ್ರಮ ಯಶಸ್ಸುಗೊಳಿಸಬೇಕಾಗಿ ಬಿ.ಬಿ ಸತೀಶ್ ಕೋರಿದ್ದಾರೆ.