ಸ್ನಾನಕ್ಕೆ ತೆರಳಿದ ಇಬ್ಬರು ಯುವಕರು ನದಿ ನೀರಿನಲ್ಲಿ ಮುಳುಗಿ ದುರ್ಮರಣ: ಓರ್ವನ ಮೃತದೇಹ ಪತ್ತೆ!
ನಾಪೋಕ್ಲು: ಸ್ನೇಹಿತರೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆ ತೆರಳಿದ ಇಬ್ಬರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಕೂರುಳಿ ಬಳಿಯ ಕಡಿಯತ್ತೂರು ದೋಣಿ ಕಡವು ಎಂಬಲ್ಲಿ ನಡೆದಿದೆ.
ಚೇರಂಬಾಣೆ ಬಳಿಯ ಪಾಕ ಮುಕ್ಕಾಟಿ ವಿಠಲ ಎಂಬುವವರ ಪುತ್ರ ಅಯ್ಯಪ್ಪ (18)ಹಾಗೂ ಐವತ್ತೋಕ್ಲು ಗ್ರಾಮದ ಚಾರಂಡ ಕಾಲೋನಿ ನಿವಾಸಿ ಪುಟ್ಟ ಎಂಬುವವರ ಪುತ್ರ ಗಿರೀಶ್ (16) ಮೃತ ದುರ್ದೈವಿಗಳಾಗಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು, ಕೂರುಳಿ ಗ್ರಾಮದಿಂದ ಕಡಿಯತ್ತೂರು, ಚೇರಂಬಾಣೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾವೇರಿ ನದಿಯಲ್ಲಿ ಸ್ನಾನಕ್ಕೆತೆರಳಿದ ಯುವಕರ ತಂಡ,ಕೂರುಳಿ ಕಡೆಯಿಂದ ಕಡಿಯತ್ತೂರು ಗ್ರಾಮಕ್ಕೆ ಜನರಿಗೆ ನದಿ ದಾಟಲು ಅಳವಡಿಸಿದ್ದ ದೋಣಿಯಲ್ಲಿ ಸಾಗುವಾಗ ದೋಣಿ ಮಗುಚಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನಾಪೋಕ್ಲು ಪೊಲೀಸರು ಹಾಗೂ ಅಗ್ನಿಶಾಮಕ, ಗೃಹರಕ್ಷಕದಳ ಸಿಬ್ಬಂದಿಗಳು ಸ್ಥಳಕ್ಕೆಧಾವಿಸಿ ನದಿ ನೀರಿನಿಂದ ಗಿರೀಶ್ ಎಂಬ ಯುವಕನ ಮೃತ ದೇಹ ಹೊರ ತೆಗೆದಿದ್ದು, ಅಯ್ಯಪ್ಪ ಎಂಬ ಯುವಕನ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
What's Your Reaction?






