ಹೆಣ್ಣಿನ ಮೋಹಕ್ಕೆ ಬಲಿಯಾಯಿತೇ ಗುತ್ತಿಗೆದಾರ ಸಂಪತ್ ಜೀವ!!!

May 14, 2025 - 22:05
 0  276
ಹೆಣ್ಣಿನ ಮೋಹಕ್ಕೆ ಬಲಿಯಾಯಿತೇ  ಗುತ್ತಿಗೆದಾರ ಸಂಪತ್ ಜೀವ!!!

ಮಡಿಕೇರಿ:ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್ ಸಿವಾಸಿ,ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿರುವ ಗುತ್ತಿಗೆದಾರ ಸಂಪತ್(ಶಂಭು) ಅವರು ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧದಿಂದ ಪ್ರಾಣ ಕಳೆದುಕೊಂಡನೇ ಎಂಬ ಮಾತುಗಳು ಕೇಳಿಬರುತ್ತಿದೆ.ಸಂಪತ್ ಅವರ ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ಸುಕಂಡ ಪೊಲೀಸ್ ತಂಡದಲ್ಲಿದ್ದ  ಪೇದೆಯೊಬ್ಬರ ಮಾಹಿತಿ ಪ್ರಕಾರ ಸಂಪತ್ ಅವರು ಹೆಣ್ಣಿನ ಮೋಹಕ್ಕೆ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಸಂಪತ್ ಅವರನ್ನು ಹತ್ಯೆಗೈದವರಿಗಾಗಿ ಪೊಲೀಸ್ ಇಲಾಖೆ ಬಲೆ ಬೀಸಿದ್ದು ಸದ್ಯದಲ್ಲೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ.ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಬಾಗೇರಿಯ ಸಮೀಪ ಕಲ್ಲಹಳ್ಳಿ ಗ್ರಾಮದಲ್ಲಿ ಜನವಸತಿ ಪ್ರದೇಶದಲ್ಲಿ ಸಂಪತ್ ಅವರ ಮೃತ ದೇಹ ಇಂದು ಬೆಳಗ್ಗೆ ಪತ್ತೆಯಾಗಿತ್ತು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0